ತುಮಕೂರು: ಆಗತಾನೆ ಹುಟ್ಟಿದ್ದ ನವಜಾತ ಹೆಣ್ಣು ಶಿಶುವೊಂದು ತುಮಕೂರು ತಾಲೂಕು ಹೊನ್ನೇನಹಳ್ಳಿ ಎಂಬ ಗ್ರಾಮದ ಗದ್ದೆಯಲ್ಲಿ ಪತ್ತೆಯಾಗಿದೆ.ಗ್ರಾಮಸ್ಥರೊಬ್ಬರು ಬಹಿರ್ದೆಸೆಗೆಂದು ತೆರಳಿದ್ದಾಗ ಮಗು ಅಳುವ ಶಬ್ದ ಕೇಳಿ ಸ್ಥಳಕ್ಕೆ ಹೋಗಿ ಮಗುವನ್ನು ನೋಡಿ ಗ್ರಾಮಕ್ಕೆ ತಂದಿದ್ದಾರೆ. ನಂತರ ಮಹದೇವಮ್ಮ ಎಂಬ ಮಹಿಳೆ ಮಗುವನ್ನ ಆರೈಕೆ ಮಾಡಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.ಇಂದು ಬೆಳಗ್ಗೆ ಸುಮಾರು 6 ಗಂಟೆಯಲ್ಲಿ ಮಗು ಜನಿಸಿದ್ದು, ಮಗುವನ್ನ ಹಾಗೇ ಬೀಸಾಡಿ ಹೋಗಿರುವುದರಿಂದ ತೀವ್ರ ಶೀತಕ್ಕೆ ರಕ್ತ ಹೆಪ್ಪುಗಟ್ಟಿದೆ. ಅಲ್ಲದೇ ಮಗುವಿನ ಉಸಿರಾಟದಲ್ಲೂ ತೀವ್ರ ತೊಂದರೆ ಇದೆ ಅಂತ ಆರೈಕೆ ಮಾಡುತ್ತಿರುವ ನರ್ಸ್ ಹೇಳುತ್ತಿದ್ದಾರೆ.ಈ ಕುರಿತು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


