ಬೆಂಗಳೂರು: ಅಧಿಕಾರ ಯಾವತ್ತೂ ಸಹ ಒಬ್ಬರ ಹತ್ತಿರ ಇರಬಾರದು, ಅದು ಸದಾ ಹಸ್ತಾಂತರವಾಗುತ್ತಿರಬೇಕೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪುಷ್ಪಾ ಅವರನ್ನು ಆಯ್ಕೆ ಮಾಡಿದ್ದರ ಬಗ್ಗೆ ಸಮರ್ಥನೆ ನೀಡಿದ ಅವರು, ಯಾವತ್ತು ಅಧಿಕಾರ ಸದಾ ಒಬ್ಬರ ಹತ್ತಿರ ಇರಬಾರದು. ಅದು ನಿಂತ ನೀರಲ್ಲ ಹೀಗಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಪುಷ್ಪ ಅಮರ್ ನಾಥ್ ಅವರಿಗೆ ರಾಜ್ಯ ಮಹಿಳಾ ಅಧ್ಯಕ್ಷೀಯ ಸ್ಥಾನವನ್ನು ನೀಡಲಾಗಿದೆ. ಅಲ್ಲದೇ ಮಹಿಳಾ ಕಾಂಗ್ರೆಸ್ಸಿನಲ್ಲಿ ಒಗ್ಗಟ್ಟಿಲ್ಲ. ಒಬ್ಬರಿಗೊಬ್ಬರು ಆರೋಪ ಮಾಡಿಕೊಳ್ಳುತ್ತಾರೆ ಎನ್ನುವ ಮಾತಿತ್ತು. ಆದರೆ ಈ ಮಾತುಗಳು ಸುಳ್ಳು ಎಂದರು.ಪುಷ್ಪಾ ಅವರು ಮೈಸೂರಿನವರಾಗಿದ್ದು ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರ ಬೆಂಬಲವೂ ಸಿಕ್ಕಿದ್ದರಿಂದ, ಅವರು ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಪುಷ್ಪ ಅವರ ಪದಗ್ರಹಣದಿಂದ ರಾಜ್ಯದ ಮಹಿಳಾ ಕಾಂಗ್ರೆಸ್ಸಿನಲ್ಲಿ ಸುವರ್ಣಯುಗ ಆರಂಭವಾಗುತ್ತದೆ ಎನ್ನುವ ಲಕ್ಷಣಗಳು ಕಾಣಿಸುತ್ತಿವೆ. ಕಾಂಗ್ರೆಸ್ಸಿನಲ್ಲಿ ಮಹಿಳೆಯರಿಗೆ ಸರಿಯಾದ ಪಾಲು ಸಿಗುತ್ತಿಲ್ಲ ಎನ್ನುವುದನ್ನು ನಾನು ಪ್ರಮಾಣೀಕವಾಗಿ ಒಪ್ಪಿಕೊಳ್ಳುತ್ತೇನೆ ಎಂದು ತಿಳಿಸಿದರು.ಗ್ಯಾಸ್ ಫ್ರೀ ಕನೆಕ್ಷನ್ ಕೊಟ್ಟಿದ್ದೇವೆಂದು ಈಗ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ದಾರೆ. ಇದರಿಂದ ಮಹಿಳೆಯರಿಗೆ ತುಂಬಾ ತೊಂದರೆ ಹಾಗೂ ಅನ್ಯಾಯವಾಗಿದೆ ಕೇಂದ್ರ ಸರ್ಕಾರವನ್ನು ಅವರು ದೂರಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


