ರಾಯಚೂರು: ಶೈವ ಲಿಂಗಾಯತ ಒಂದೇ ಧರ್ಮ, ಪ್ರತ್ಯೇಕ ಧರ್ಮ ಮಾಡಲು ಹೋಗಿದ್ದು ತಪ್ಪಾಗಿದೆ ಎಂದು ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಕ್ಕೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿದೆ ಎಂದು ರಂಭಾಪುರಿ ಜಗದ್ಗುರು ಶ್ರೀ ಪ್ರಸನ್ನ ವೀರಸೋಮೇಶ್ವರ ಸ್ವಾಮಿಜಿ ಹೇಳಿದ್ದಾರೆ.ರಾಯಚೂರಿನಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪ್ರತ್ಯೇಕ ಧರ್ಮ ಮುಗಿದ ಅಧ್ಯಾಯ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಯಲ್ಲಿ ಪ್ರತ್ಯೇಕ ಧರ್ಮ ಮಾಡಲು ಕೆಲವರು ಪ್ರಚೋದಿಸಿದ್ದರು. ಆದರೆ ಈಗಿನ ಸಮ್ಮಿಶ್ರ ಸರ್ಕಾರ ಪ್ರತ್ಯೇಕ ಧರ್ಮದ ಬಗ್ಗೆ ಕೇಂದ್ರಕ್ಕೆ ಮತ್ತೊಮ್ಮೆ ಶಿಫಾರಸ್ಸು ಮಾಡುವ ಸಾಧ್ಯತೆ ಕಡಿಮೆಯಿದೆ. ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಲಿಂಗಾಯತ ಹಾಗು ವೀರಶೈವ ಪ್ರತ್ಯೇಕ ಧರ್ಮ ಮಾಡುವ ಒಲವು ಇಲ್ಲ ಹೇಳಿದ್ದಾರೆ. ಸದ್ಯ ರಾಜ್ಯದ ಕಾಂಗ್ರೆಸ್ ನಾಯಕರು ಕೂಡ ಈ ಕುರಿತು ಕೇಂದ್ರ ನಾಯಕರಿಗೆ ಮನವರಿಗೆ ಮಾಡಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಧರ್ಮ ವಿಭಜನೆ ವಿಚಾರದಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.ಇದೇ ವೇಳೆ ರಾಜ್ಯ ಸರ್ಕಾರ ಬೆಳೆ ಸಾಲ ಮನ್ನಾ ಘೋಷಣೆ ಮಾಡಿದೆ. ಆದರೆ ವಿಳಂಬ ಮಾಡುತ್ತಿರುವುದು ಸರಿ ಅಲ್ಲ. ವಿಳಂಬದಿಂದಾಗಿ ರೈತರ ಆತ್ಮಹತ್ಯೆಗಳು ಮುಂದುವರಿದಿವೆ. ಕಬ್ಬು ಬೆಳೆಗಾರ ಸಮಸ್ಯೆಯ ಬಗ್ಗೆಯೂ ಸರಕಾರ ಪರಿಹಾರಕ್ಕೆ ಚಿಂತಿಸಬೇಕು ಎಂದರು.ಡಿಕೆ ಶಿವಕುಮಾರ್ ಹೇಳಿದ್ದು ಏನು?
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶರನ್ನವರಾತ್ರಿ ಅಂಗವಾಗಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ನಡೆದ ಧರ್ಮಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಕೆ ಶಿವಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ನಮ್ಮ ಸರ್ಕಾರದಲ್ಲಿ ನಾವು ದೊಡ್ಡ ತಪ್ಪನ್ನು ಮಾಡಿದ್ದೇವೆ. ಸರ್ಕಾರದವರು, ರಾಜಕೀಯದವರು ಧರ್ಮದ ವಿಚಾರದಲ್ಲಿ ಜಾತಿಯ ವಿಚಾರದಲ್ಲಿ ಕೈ ಹಾಕಬಾರದು. ನಮ್ಮ ಸರ್ಕಾರದಿಂದ ದೊಡ್ಡ ಅಪರಾಧವಾಗಿದೆ. ನಾನೂ ಸಹ ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ. ನಮ್ಮ ಬೇರೆ ಸಚಿವರು ವಿಭಿನ್ನವಾಗಿ ಮಾತನಾಡಿದರು. ಆದ್ರೆ ಸರ್ಕಾರದ ತೀರ್ಮಾನ ಆ ಸಂದರ್ಭದಲ್ಲಿ ಬೇಕಾದಷ್ಟು ಅಲ್ಲೋಲ ಕಲ್ಲೋಲ ಸೃಷ್ಟಿಯಾಯ್ತು. ರಾಜಕೀಯದಲ್ಲಿ ಅನೇಕ ವಿಭಿನ್ನವಾದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಯಾವುದೇ ಸರ್ಕಾರ ಧರ್ಮದಲ್ಲಿ ಕೈ ಹಾಕಬಾರದು ಎನ್ನೋದಕ್ಕೆ ಮೊನ್ನೆ ನಡೆದ ಜನಾಭಿಪ್ರಾಯವೇ ಸಾಕ್ಷಿ ಎಂದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews Sign in to your account
Username or Email Address


Password

 Remember Me


