ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಗೆಲುವಿಗೆ ಶ್ರಮಿಸಿ ಪಕ್ಷದ ಅಭ್ಯರ್ಥಿಯ ಭರ್ಜರಿ ಗೆಲುವಿಗೆ ಕಾರಣರಾಗಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಕ್ಷೇತ್ರಕ್ಕೆ ತೆರಳಿ ವಿಜಯೋತ್ಸವದಲ್ಲಿ ಭಾಗವಹಿಸಿರಲಿಲ್ಲ. ಸದ್ಯ ಡಿಕೆಶಿ ಅವರ ಈ ನಡೆ ಕುತೂಹಲ ಮೂಡಿಸಿದ್ದು, ಅವರ ಈ ನಡೆಗೆ ಪ್ರೇರಕ ಶಕ್ತಿಯೇ ಕಾರಣ ಎನ್ನಲಾಗುತ್ತಿದೆ.ಚುನಾವಣೆ ಫಲಿತಾಂಶದ ಬಳಿಕ ಮಾತನಾಡಿದ್ದ ಡಿಕೆ ಶಿವಕುಮಾರ್, ಬಳ್ಳಾರಿಯಲ್ಲಿ ವಿಜಯೋತ್ಸವ ಆಚರಣೆ ವೇಳೆ ಭಾಗವಹಿಸಲು ಚಿಂತನೆ ನಡೆಸುವುದಾಗಿ ತಿಳಿಸಿದ್ದರು. ಆದರೆ ಆ ಬಳಿಕ ಬಳ್ಳಾರಿಗೆ ತೆರಳದೆ ಸುಮ್ಮನಿದ್ದರು. ಈ ಹಿಂದೆ ವಿರೋಧಿ ಪಕ್ಷದ ಮುಖಂಡರ ಟೀಕೆಗೆ ನೇರ ಟಾಂಗ್ ನೀಡುತ್ತಿದ್ದ ಡಿಕೆಶಿ, ಸದ್ಯ ಶಾಂತಿಯ ಜಪ ಮಾಡುತ್ತಿದ್ದಾರೆ. ಅಲ್ಲದೇ ಚುನಾವಣೆಯ ವೇಳೆಯೂ ಶಾಸಕ ಶ್ರೀರಾಮುಲು ಅವರನ್ನು ರಾಮುಲು ಅಣ್ಣ ಹಾಗೂ ಬಿಜೆಪಿ ಅಭ್ಯರ್ಥಿಯನ್ನು ಶಾಂತಕ್ಕ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು.ಡಿಕೆ ಶಿವಕುಮಾರ್ ಅವರ ಈ ಬದಲಾವಣೆಗೆ ಅಧ್ಯಾತ್ಮ ಗುರು ನೊಣವಿನರೆಕೆರೆ ಅಜ್ಜಯ್ಯ ಅವರ ಮಾತು ಕಾರಣ. ಚುನಾವಣೆಯಲ್ಲಿ ಗೆದ್ದ ಬಳಿಕ ಯಾವುದೇ ಹಮ್ಮು ಇಲ್ಲದೇ ತಲೆಬಾಗಿ ನಡೆಯುವಂತೆ ಸಲಹೆ ನೀಡಿದ್ದಾರೆ. ಅಲ್ಲದೇ ಎಲ್ಲರಿಗೂ ಗೌರವ ನೀಡಿ ಜನರ ಪ್ರೀತಿ ಗಳಿಸುವಂತೆ ಅಜ್ಜಯ್ಯ ಸೂಚನೆ ನೀಡಿದ್ದಾರೆ. ಅಜ್ಜಯ್ಯನವರ ಆಣತಿಯಂತೆ ಡಿಕೆ ಶಿವಕುಮಾರ್ ಶಾಂತ ಸ್ವರೂಪಿಯಾಗಿದ್ದಾರೆ ಎನ್ನಲಾಗಿದೆ.ಈ ನಡುವೆ ಡಿಕೆ ಶಿವಕುಮಾರ್ ಅವರು ನವೆಂಬರ್ 19ಕ್ಕೆ ಬಳ್ಳಾರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡಿದ ಮತದಾರರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


