ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಹೊಸಕನ್ನಂಬಾಡಿ ಗ್ರಾಮದ ಮನೆಯೊಂದರಲ್ಲಿ ಅಡುಗೆ ಮಾಡುವ ಸಂದರ್ಭದಲ್ಲೇ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ.ಹೊಸಕನ್ನಂಬಾಡಿ ಗ್ರಾಮದ ಸೋಮಚಾರಿ ಎಂಬವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಮನೆಯಲ್ಲಿ ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ಶಂಕಿಸಲಾಗಿದೆ. ಅಲ್ಲದೆ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿ, ಮನೆ ಸಂಪೂರ್ಣ ಸುಟ್ಟುಹೋಗಿದೆ.ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ಸ್ಫೋಟದಿಂದ ಲಕ್ಷಾಂತರ ರೂ. ಬೆಳೆಬಾಳುವ ವಸ್ತುಗಳು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


