ಬಾಗಲಕೋಟೆ: ಜಮಖಂಡಿ ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಆನಂದ್ ನ್ಯಾಮಗೌಡ ಅವರು ಅಲ್ಪಸಂಖ್ಯಾತರನ್ನು ಒಲೈಸಲು ಹೋಗಿ ಬ್ರ್ರಾಹ್ಮಣರನ್ನು ಹೀಯಾಳಿಸಿ ಬಳಿಕ ಕ್ಷಮೆಯಾಚಿಸಿದ ಘಟನೆ ಇಂದು ನಡೆದಿದೆ.ಜಮಖಂಡಿಯಲ್ಲಿ ಇಂದು ನಡೆದ ಅಲ್ಪಸಂಖ್ಯಾತ ಸಮುದಾಯದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಆನಂದ್ ನ್ಯಾಮಗೌಡ, 1990 ರಲ್ಲಿ ನಮ್ಮ ತಂದೆ ಸಿದ್ದು ನ್ಯಾಮಗೌಡ ಬ್ರಾಹ್ಮಣ ಸಮುದಾಯದ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ದೇಶಕ್ಕೆ ಚಿರಪರಿಚಿತರಾಗಿದ್ರು. ಸದ್ಯ ನಾನು ಬ್ರಾಹ್ಮಣ ವ್ಯಕ್ತಿಯನ್ನು ಸೋಲಿಸಿ ಶಾಸಕನಾಗಿದ್ದೇನೆ. ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಅವರನ್ನು ಸೋಲಿಸಿ ಇಂದು ಅಧಿಕಾರದಲ್ಲಿದ್ದೇನೆ ಎಂದು ವ್ಯಂಗ್ಯವಾಡಿದ್ದರು.ಆನಂದ್ ನ್ಯಾಮಗೌಡರ ಹೇಳಿಕೆಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬ್ರಾಹ್ಮಣ ಸಮಾಜದವರಿಂದ ಆನಂದ್ ನ್ಯಾಮಗೌಡರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿತ್ತು. ಈ ವಿಡಿಯೋ ಪಬ್ಲಿಕ್ ಟಿವಿಗೆ ಲಭಿಸಿದ್ದು, ಪ್ರಸಾರವಾದ ಬೆನ್ನಲ್ಲೇ ಶಾಸಕರು ಕ್ಷಮೆ ಕೋರಿದ್ದಾರೆ.ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, `ಬ್ರಾಹ್ಮಣ ಸಮುದಾಯವನ್ನು ಹೀಯಾಳಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನನಗಿಂತ ಮೊದಲು ಭಾಷಣ ಮಾಡಿದವರು ಹೇಳಿದ ಮಾತನ್ನು ನಾನು ಮತ್ತೊಮ್ಮೆ ಹೇಳಿದ್ದೆ ಅಷ್ಟೆ. ಬ್ರಾಹ್ಮಣರನ್ನ ಸೋಲಿಸೋದು ನನ್ನ ಉದ್ದೇಶವಲ್ಲ ಚುನಾವಣೆ ಗೆಲ್ಲೋದು ನನಗೆ ಮುಖ್ಯವಾಗಿತ್ತು ಎಂದು ಸ್ಪಷ್ಟ ಪಡೆಸಲು ಆ ಮಾತು ಹೇಳಿದ್ದೆ. ಎಲ್ಲ ಸಮುದಾಯವನ್ನು ನಾವು ಸಮನಾಗಿ ನೋಡುತ್ತೇವೆ. ನನ್ನ ಹೇಳಿಕೆಯಿಂದ ಬ್ರಾಹ್ಮಣ ಸಮಾಜದವರಿಗೆ ನೋವಾಗಿದ್ದರೆ ಕ್ಷಮೆ ಕೇಳಲು ನಾನು ಸಿದ್ಧ ಎಂದು ಆನಂದ್ ನ್ಯಾಮಗೌಡ ಹೇಳಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


