ಬೆಂಗಳೂರು: ರಾಜ್ಯ ಸರ್ಕಾರವು ಹಾಲಿನ ದರ ಹೆಚ್ಚಳ ಮಾಡುವ ಯಾವುದೇ ಚಿಂತನೆಯನ್ನು ನಡೆಸಿಲ್ಲ ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಸರ್ಕಾರ ನೀಡುತ್ತಿರುವ 5 ರೂ. ಸಹಾಯ ಧನ ಸರಿಯಾದ ಸಮಯಕ್ಕೆ ತಲುಪುತ್ತಿದೆ. ಹಾಲಿನ ದರ ಏರಿಕೆ ಮಾಡುವ ಆಲೋಚನೆ ಸರ್ಕಾರದ ಮುಂದಿಲ್ಲ. ದರ ಹೆಚ್ಚಳ ಹಾಗೂ ಕಡಿಮೆ ಮಾಡುವ ಕುರಿತು ಯಾವುದೇ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟನೆ ನೀಡಿದರು.ಮೈಕ್ರೋ ಚಿಪ್: ಪಶು ಭಾಗ್ಯ ಯೋಜನೆ ಅಡಿ ನೀಡುವ ಹಸುಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡಲಾಗುತ್ತಿದೆ. ಹಾಲು ಕರೆಯುವ ಹಸುಗಳಿಗೆ ಮಾತ್ರ ಚಿಪ್ ಆಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಚಿಪ್ ಮೂಲಕ ಹಸುವಿನ ಸಂಪೂರ್ಣ ಮಾಹಿತಿ ಟ್ರಾಕ್ ಮಾಡಲಾಗುತ್ತಿದೆ. ಇದರಿಂದ ಹಸುವಿನ ಆರೋಗ್ಯ ಬಗ್ಗೆ ಮಾಹಿತಿ ಪಡೆಯಲು ಸಹಾಯಕವಾಗುತ್ತದೆ. ಚಿಪ್ ಅಳವಡಿಸುವ ಕಾರ್ಯ ಶೇ.60 ರಷ್ಟು ಕಾರ್ಯ ಪೂರ್ಣಗೊಂಡಿದ್ದು, ಇದುವರೆಗೂ 1.8 ಲಕ್ಷ ಹಸುಗಳಿಗೆ ಚಿಪ್ ಆಳವಡಿಕೆ ಮಾಡಲಾಗಿದೆ. ಒಂದು ಚಿಪ್ಪಿನ ಬೆಲೆ 6 ರೂ. 20 ಪೈಸೆ ಎಂದು ವಿವರಿಸಿದರು.ರೇವಣ್ಣ ಹಸ್ತಕ್ಷೇಪವಿಲ್ಲ: ಕೆಎಂಎಫ್ ಹೆಚ್ಚಿನ ಅಭಿವೃದ್ಧಿ ಆಗುತ್ತಿಲ್ಲ ಎಂವ ಸಚಿವ ರೇವಣ್ಣ ಹೇಳಿಕೆ ವಿಚಾರವಾಗಿ ಪ್ರಕ್ರಿಯೆ ನೀಡಿದ ಅವರು, ಲೋಕೋಪಯೋಗಿ ಇಲಾಖೆ ಸಚಿವ ರೇವಣ್ಣ ಅವರು ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಆದರೆ ಕೆಎಂಎಫ್ ಅಭಿವೃದ್ಧಿಗೆ ರೇವಣ್ಣ ಅವರ ಕೊಡುಗೆ ಅಪಾರ. ಯಾರೇ ಆದ್ರು ಕಟ್ಟಿದ ಸಂಸ್ಥೆಗೆ ಸಮಸ್ಯೆ ಮಾಡಿದರೆ ಎಲ್ಲರಿಗೂ ನೋವಾಗುತ್ತೆ. ಆ ವೇಳೆ ಹೇಳಿಕೆ ನೀಡಿರಬಹುದು ಅಷ್ಟೇ ಎಂದರು.ಇದೇ ವೇಳೆ ಟಿಪ್ಪು ಕಾರ್ಯಕ್ರಮಕ್ಕೆ ಆಗಮಿಸದ ಕುರಿತು ಸ್ಪಷ್ಟನೆ ನೀಡಿದ ನಾಡಗೌಡ ಅವರು, ಟಿಪ್ಪು ಜಯಂತಿಗೆ ಕಾರ್ಯಕ್ರಮಕ್ಕೆ ಆಗಮಿಸಲು ನಾನು ಟಿಕೆಟ್ ಬುಕ್ ಮಾಡಿದ್ದೆ, ಆದರೆ ಸಚಿವ ರೇವಣ್ಣ ನಾನು ಹೋಗುತ್ತೆನೆ ಎಂದು ಹೇಳಿದ್ದರು. ಅದ್ದರಿಂದ ನಾನು ಆಗಮಿಸಲಿಲ್ಲ ಎಂದರು.ರಾಜ್ಯದಿಂದ ತೆಲಂಗಾಣ ಹಾಗೂ ಆಂಧ್ರಪ್ರದೇಶಕ್ಕೆ ಸರಬರಾಜು ಆಗುತ್ತಿದ್ದ ಮೇವು ತಡೆಯಲು ಆದೇಶ ಮಾಡಲಾಗಿದೆ. ಬೇಸಿಗೆ ವೇಳೆ ಮೇವಿನ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ದೊರೆಯುವ ಮೇವನ್ನು ವೈಜ್ಞಾನಿಕವಾಗಿ ಸಂರಕ್ಷಣೆ ಮಾಡಲಾಗುವುದು ಎಂದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


