ಮೈಸೂರು: ಕಲ್ಯಾಣ ಮಂಟಪಕ್ಕೆ ವಧು ಬಾರದ ಕಾರಣ ಮದುವೆ ಮುರಿದು ಬಿದ್ದಿರುವ ಪ್ರಕರಣ ಮೈಸೂರಿನಲ್ಲಿ ನಡೆದಿದೆ.ಈ ಹಿಂದೆ ರಿಜಿಸ್ಟರ್ ಮದುವೆ ಮಾಡಿಕೊಂಡು ಇಂದು ಮತ್ತೊಬ್ಬರ ಜೊತೆ ಮದುವೆಗೆ ವಧು ಮುಂದಾಗಿ ಕೊನೆ ಕ್ಷಣದಲ್ಲಿ ಮದುವೆಯನ್ನು ಮುರಿದುಕೊಂಡಿದ್ದಾಳೆ. ಚಿಕ್ಕಮಗಳೂರು ಮೂಲದ ಕವಿತಾ(ಹೆಸರು ಬದಲಾಯಿಸಲಾಗಿದೆ) ಇಂದು ಮೈಸೂರಿನಲ್ಲಿ ಟಿ. ನರಸೀಪುರ ಮೂಲದ ನಿಖಿಲ್ ಅರಸ್ ಅವರನ್ನು ಕೈ ಹಿಡಿಯಬೇಕಿತ್ತು.ಈಗಾಗಲೇ ತನ್ನ ಪ್ರೇಮಿಯೊಂದಿಗೆ ರಿಜಿಸ್ಟರ್ ಮದುವೆ ಆಗಿರುವ ಕವಿತಾ, ಮನೆಯವರ ಒತ್ತಾಯದ ಮೇರೆಗೆ ನಿಖಿಲ್ ಅರಸ್ ಜೊತೆ ನಿಶ್ಚಿತಾರ್ಥವಾಗಿ ಇಂದು ಮದುವೆ ಆಗಬೇಕಿತ್ತು. ಮಂಗಳವಾರ ರಾತ್ರಿ ಆರತಕ್ಷತೆ, ಇಂದು ಬೆಳಗ್ಗೆ 6.45 ರಿಂದ 7.45 ಮೂಹೂರ್ತದಲ್ಲಿ ಮದುವೆ ನಡೆಯಬೇಕಿತ್ತು.ಮಂಗಳವಾರ ಕಲ್ಯಾಣ ಮಂಟಪಕ್ಕೆ ಬರೋದಾಗಿ ಚಿಕ್ಕಮಗಳೂರುನಿಂದ ಹೊರಟಿದ್ದ ಕವಿತಾ, ಕಲ್ಯಾಣ ಮಂಟಪಕ್ಕೆ ಹೋಗುವ ವೇಳೆ ತನ್ನ ಪೋಷಕರಿಗೆ ನಾನು ಈಗಾಗಲೇ ರಿಜಿಸ್ಟರ್ ಮದುವೆ ಆಗಿರುವುದಾಗಿ ಹೇಳಿದ್ದಾಳೆ. ಇದರಿಂದ ಕಂಗಾಲಾದ ಕವಿತಾ ಕುಟುಂಬ ಕಲ್ಯಾಣ ಮಂಟಪಕ್ಕೆ ಬಾರದೇ ದೂರ ಉಳಿದಿದೆ.ಕವಿತಾಳ ನಡವಳಿಕೆಯಿಂದ ವರ ನಿಖಿಲ್ ಅರಸ್ ಕುಟುಂಬ ಕಕ್ಕಾಬಿಕ್ಕಿಯಾಗಿದೆ. ವಧುವಿಗಾಗಿ ಕಲ್ಯಾಣ ಮಂಟಪದಲ್ಲೇ ವರನ ಸಂಬಂಧಿಕರು ಇನ್ನೂ ಕಾಯುತ್ತಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ಇರುವ ಕವಿತಾಳನ್ನು ಮನವೂಲಿಸಲು ನಿಖಿಲ್ ಅರಸ್ ಕುಟುಂಬ ಹಾಗೂ ಕವಿತಾ ಪೋಷಕರು ಮುಂದಾಗಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


