ಧಾರವಾಡ: ಕೇಂದ್ರ ಸಚಿವ ಅನಂತಕುಮಾರ ಅವರು ಪಿಯುಸಿ ಕಾಲೇಜು ಶಿಕ್ಷಣ ಪಡೆದಿದ್ದ ಹುಬ್ಬಳ್ಳಿಯ ಪಿ ಸಿ ಜಾಬಿನ್ ಕಾಲೇಜಿನ ಆವರಣದಲ್ಲಿ ನೀರವ ಮೌನ ಆವರಿಸಿದ್ದು, ಅನಂತಕುಮಾರ ಅವರ ನಿಧನದ ಸುದ್ದಿ ತಿಳಿಯುತಿದ್ದಂತೆಯೇ ಇಡೀ ಕಾಲೇಜಿನಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.1974 ರಿಂದ 76 ವರೆಗೂ ಪಿಸಿ ಜಾಬಿನ್ ಕಾಲೇಜಿನಲ್ಲಿ ಪಿಯುಸಿ ವಿಜ್ಞಾನ ವಿದ್ಯಾರ್ಥಿಯಾಗಿದ್ದ ಅನಂತ್ ಕುಮಾರ್ ಅವರು, ಎಬಿವಿಪಿಯಲ್ಲಿ ಸಂಘಟನೆಯಲ್ಲಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾಲೇಜು ದಿನಗಳಿಂದಲೇ ಸಂಘಟನಾ ಚತುರರಾಗಿದ್ದು, ಹಲವು ಹೋರಾಟಗಳನ್ನ ಮಾಡಿದ್ದರು.ಈ ವೇಳೆ ಅನಂತ್ ಕುಮಾರ್ ಅವರನ್ನು ನೆನೆಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಶಿವಪ್ರಕಾಶ್ ಅವರು, ಅನಂತ್ ಕುಮಾರ್ ಅವರ ನಿಧನ ಸಾಕಷ್ಟು ನೋವು ತಂದಿದೆ. ರಾಷ್ಟ್ರದ ಮಟ್ಟದಲ್ಲಿ ಅನಂತ್ ಕುಮಾರ್ ಅವರು ನಾಯಕರಾಗಿ ಹೆಸರು ಪಡೆದಿದ್ದರು. ಅವರ ಸಾವಿನ ನೋವಿನವನ್ನು ಭರಿಸುವಂತಹ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ತಿಳಿಸಿದರು. ಇದೇ ವೇಳೆ ಅನಂತ್ ಕುಮಾರ್ ಅವರ ಧರ್ಮಪತ್ನಿ ಅವರು ಕೂಡಾ ಇದೇ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದಿದ್ದರು ಎಂದು ತಿಳಿಸಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


