ಕಾರವಾರ: ಅತೀ ವೇಗದ ಚಾಲನೆಯಿಂದ ನಿಂತ್ರಣ ತಪ್ಪಿದ ಸ್ಕಾರ್ಪಿಯೋ ವಾಹನವು ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೊಳ್ಳಿ ಕ್ರಾಸ್ ಬಳಿ ನಡೆದಿದೆ.ಮೃತ ದುರ್ದೈವಿಗಳನ್ನು ಫಾತಿಮಾ, ರುಕಿಯಾ, ಚಾಬುಸಾಬ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಆನಂದಪುರ ಮೂಲದವರು ಎಂದು ಹೇಳಲಾಗುತ್ತಿದೆ. ಗೋವಾದಲ್ಲಿ ಮದುವೆ ಕಾರ್ಯ ಮುಗಿಸಿ ವಾಪಸ್ಸಾಗುತ್ತಿದ್ದಾಗ ಇಂದು ಬೆಳಗ್ಗಿನ ಜಾವ ಈ ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಆರು ಜನರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


