ಚಿಕ್ಕಮಗಳೂರು: ಊರಿನಲ್ಲಿ ಬರಗಾಲ, ಮಕ್ಕಳ ಭವಿಷ್ಯಕ್ಕಾಗಿ ಬೆಂಗಳೂರಿನಲ್ಲೇ ಇರೋಣ ಅಂದಿದ್ದಕ್ಕೆ ಪತ್ನಿಯನ್ನೇ ಪತಿ ಕೊಂದಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಜೋಡಿಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.ಜ್ಯೋತಿ ಬಾಯಿ ಎಂಬವರೇ ಕೊಲೆಯಾದ ಮಹಿಳೆ. ಮೃತ ಜ್ಯೋತಿ ಬಾಯಿ ಹಾಗೂ ಮಹೇಶ್ ನಾಯ್ಕ್ ಮೂಲತಃ ಜೋಡಿಲಿಂಗದಹಳ್ಳಿ ಗ್ರಾಮದ ನಿವಾಸಿಗಳು. ಈ ಜೋಡಿಗೆ ಇಬ್ಬರು ಮಕ್ಕಳೂ ಕೂಡ ಇದ್ದಾರೆ. ಕೆಲ ವರ್ಷಗಳ ಹಿಂದೆ ಮಳೆ-ಬೆಳೆ ಇಲ್ಲದ ಕಡೂರಿನಲ್ಲಿ ಜೀವನ ನಡೆಸುವುದು ಕಷ್ಟವೆಂದು ಇಡೀ ಕುಟುಂಬವೇ ಬೆಂಗಳೂರಿಗೆ ಬಂದು ಸೇರಿತ್ತು. ಒಂದೆಡೆ ಗಂಡ ಟಿಂಬರ್ ಕೆಲಸಕ್ಕೆ ಹೋದ್ರೆ, ಇನ್ನೊಂದೆಡೆ ಹೆಂಡತಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೋಗಿದ್ದಾಗ, ಮಹೇಶ್ ಪತ್ನಿಗೆ ಮತ್ತೆ ಬೆಂಗಳೂರಿಗೆ ಹೋಗೋದು ಬೇಡ ಇಲ್ಲಿಯೇ ಇರೋಣ ಎಂದಿದ್ದಾನೆ. ಈ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ಕೋಪಗೊಂಡಿದ್ದ ಮಹೇಶ್ ಮನೆಗೆ ಕುಡಿದು ಬಂದು ಮೊದಲು ಮಕ್ಕಳಿಗೆ 5 ರೂ. ದುಡ್ಡು ಕೊಟ್ಟು ಚಾಕಲೇಟ್ ತರಲು ಅಂಗಡಿಗೆ ಕಳುಹಿಸಿದ್ದಾನೆ. ನಂತರ ಪತ್ನಿಯನ್ನು ಹೊಡೆದು ಸಾಯಿಸಿದ್ದಾನೆ. ಆ ಬಳಿಕ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಕುತ್ತಿಗೆಗೆ ಹಗ್ಗ ಹಾಕಿಕೊಂಡು ಕೆಳಗೆ ಬಿದ್ದಿದ್ದಾನೆ. ಮಕ್ಕಳು ಅಂಗಡಿಯಿಂದ ಹಿಂತಿರುಗಿ ಬಂದು ಬಾಗಿಲು ಬಡಿದಾಗ ಯಾರು ಬಾರದ ಕಾರಣ ಅಕ್ಕಪಕ್ಕದವರು ಬಂದು ಮನೆಯ ಹೆಂಚು ತೆಗೆದು, ಜ್ಯೋತಿಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ಜ್ಯೋತಿಯ ಕುಟುಂಬಸ್ಥರು ಹೇಳಿದ್ದಾರೆ.ಸದ್ಯ ಆರೋಪಿ ಮಹೇಶ್‍ನನ್ನು ಪೊಲೀಸರು ಬಂಧಿಸಿದ್ದು, ಸಖರಾಯಪಟ್ಟಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


