ಹುಬ್ಬಳ್ಳಿ: ಕೇಂದ್ರ ಸಚಿವ ಅನಂತ ಕುಮಾರ್ ಅವರು ಇಂದು ನಸುಕಿನ ಜಾವ ಅನಾರೋಗ್ಯದಿಂದ ವಿಧಿವಶರಾಗಿದ್ದು, ದೇಶ ಹಾಗೂ ರಾಜ್ಯದ ಎಲ್ಲಾ ರಾಜಕೀಯ ನಾಯಕರು ಕಂಬನಿ ಮಿಡಿಯುತ್ತಿದ್ದಾರೆ.ಅನಂತ್ ಜೀ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ದುಃಖತಪ್ತರಾದ ಸಂಸದ ಪ್ರಹ್ಲಾದ್ ಜೋಷಿ, ಇತ್ತೀಚೆಗೆ ಸದನದಲ್ಲಿ ಕೂಡ ಅನೇಕ ಮಂತ್ರಿಗಳಿಗೆ ನಮ್ಮ ಕ್ಷೇತ್ರದ ಕೆಲಸಕ್ಕೆ ಫೋನ್ ಮಾಡಿ ಕರೆಸಿ, ಹುಬ್ಬಳ್ಳಿಯಲ್ಲಿ ಎಂತಾ ದುರ್ದೈವ ನೋಡಿ ಕ್ಯಾನ್ಸರ್ ಆಸ್ಪತ್ರೆ ಆಗಬೇಕು ಅಂತ ಹೇಳಿದಾಗ, ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ತನ್ನ ಛೇಂಬರ್ ಗೆ ಕರೆಸಿ ಮಾತನಾಡಿದ್ರು.ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ನಿಂದ ತಾಯಿ ತೀರಿಕೊಂಡರು. ನಡ್ಡಾ ಜೀ.. ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಬೇಕು. ಪ್ರಹ್ಲಾದ್ ಜೋಷಿ ಹೇಳ್ತಾ ಇದ್ದಾನೆ. ಜಾಗ ಕೊಡುಸ್ತೀನಿ ಅಂತಾನೆ. ಹೀಗಾಗಿ ಅಲ್ಲೊಂದು ಕ್ಯಾನ್ಸರ್ ಆಸ್ಪತ್ರೆ ಮಾಡು ಅಂತ ಅನಂತ ಕುಮಾರ್ ಅವರು ಆರೋಗ್ಯ ಸಚಿವ ಜೆಪಿ ನಡ್ಡಾ ಅವರಿಗೆ ಸೂಚಿಸಿದ್ದರು. ನಡ್ಡಾ ಅವರು ಕರ್ನಾಟಕ ಸರ್ಕಾರಕ್ಕೆ ಪ್ರೊಪೋಸಲ್ ಕಳುಹಿಸಿ ಇನ್ ಪ್ರಿನ್ಸಿಪಲ್ ಒಪ್ಪಿಗೆ ಕೊಟ್ಟು ಕಳುಹಿಸ್ತೀನಿ ಅಂತ ಹೇಳಿದ್ದರು. ಆದ್ರೆ ಇಂದು ಅನಂತ್ ಜೀ ಅದೇ ಕ್ಯಾನ್ಸರ್ ನಿಂದ ಈ ಲೋಕವನ್ನು ತ್ಯಜಿಸುತ್ತಾರೆ ಎಂದು ಊಹಿಸಿಯೂ ಇಲ್ಲ ಅಂತ ಕಣ್ಣೀರು ಹಾಕಿದ್ರು.ಅನಂತ್ ಜೀ ಇನ್ನಿಲ್ಲ ಅಂದಾಗ ನನಗೆ ಬಹಳ ದೊಡ್ಡ ಆಘಾತವೇ ಆಗಿದೆ. ಅವರೊಬ್ಬ ನನ್ನ ವೈಯಕ್ತಿಕ ಗೆಳೆಯ ಅಲ್ಲದೇ ಮಾರ್ಗದರ್ಶಕರಾಗಿಯೂ ಇದ್ದರು. ದೇವರ ಇಚ್ಛೆಗೆ ಉಪಾಯವಿಲ್ಲ ಅಂತ ಗದ್ಗದಿತರಾದ್ರು.ಪಾರ್ಲಿಮೆಂಟ್ ನಲ್ಲಿ ಕ್ಯಾಂಟೀನ್ ಊಟ ಮಾಡಲು ಬಿಡುತ್ತಿರಲಿಲ್ಲ. ಊಟ ನನ್ನ ಛೇಂಬರ್ ನಲ್ಲೇ ಬಂದು ಮಾಡಬೇಕು ಅಂತ ಹೇಳುತ್ತಿದ್ದರು. ಅಧಿವೇಶನದ ಸಂದರ್ಭದಲ್ಲಿ ಊಟಕ್ಕೆ ಅವರ ಮನೆಯಲ್ಲೇ ಮಾಡಲು ಬೈದು ಕರೆದುಕೊಂಡು ಹೋಗುತ್ತಿದ್ದರು. ಮತ್ತೊಂದು ಸಲ ನೀನು ಗೆಲ್ಲಬೇಕು. ನಿನ್ನ ಕ್ಷೇತ್ರದಲ್ಲಿ ಏನೇನ್ ಕೆಲ್ಸ ಇದೆ ಅದನ್ನು ಈಗ ಮುಗಿಸಿಬಿಡು ಅಂತ ಹೇಳುತ್ತಿದ್ದರು.ಅನಂತ್ ಜೀ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸಂಘಟಿಸಿ 89+5 ಸ್ಥಾನ ಬಂದಿತ್ತು. ಅವರು ಅವತ್ತು ಅಧ್ಯಕ್ಷರಾಗಿ ರಾಜಕೀಯ ಧ್ರುವೀಕರಣ ಆಗದೇ ಇರುತ್ತಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಈ ಸ್ಥಿತಿಗೆ ಬರುತ್ತಿರಲಿಲ್ಲ. ಯಡಿಯೂರಪ್ಪ, ಅನಂತ್ ಜೀ ಅವರನ್ನು ದುಡಿಯುವ ಎತ್ತು ಅಂತ ಕರೆಯುತ್ತಿದ್ದರು. ಬಿಎಸ್‍ವೈ ಮಾಸ್ ಲೀಡರ್, ಇವರೊಬ್ಬ ಕರ್ನಾಟಕ ರಾಜ್ಯದ ಬ್ರೈನ್. ಈ ರೀತಿಯ ಪ್ರಖ್ಯಾತಿಯನ್ನು ಅವರಿಬ್ಬರೂ ಪಡೆದಿದ್ದರು ಅಂತ ಮೆಲುಕು ಹಾಕಿದ್ರು.ಎಬಿವಿಪಿ ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ನಿಪುಣರಾಗಿದ್ದರು. ಇವತ್ತು ಬಹುತೇಕವಾಗಿ ಜನತಾ ಪರಿವಾರದಿಂದ ಬಂದವರು ಬಿಜೆಪಿಯಲ್ಲಿ ಇದ್ದಾರೆಯೋ ಅದರಲ್ಲಿ ಶೇ.90ರಷ್ಟು ಮಂದಿ ಅನಂತ ಕುಮಾರ್ ಅವರ ವೈಯಕ್ತಿಕ ಸಂಬಂಧ, ಚಾಕಚಕ್ಯತೆಯಿಂದ ಬಂದು ಉಳಿದುಕೊಂಡಿದ್ದಾರೆ ಅಂತ ಹೇಳಿದ್ರು.ಅನಂತ್ ಜೀ ತಂದೆ ಸಾಮಾನ್ಯ ವ್ಯಕ್ತಿಯಾಗಿದ್ದು, ಓರ್ವ ರೈಲ್ವೇ ನೌಕರರಾಗಿದ್ದಾರೆ. ಅವರು ಕೂಡ ಕ್ಯಾನ್ಸರ್ ನಿಂದಲೇ ತೀರಿಕೊಂಡರು. ತಾಯಿ ಕೂಡ ಕ್ಯಾನ್ಸರ್‍ನಿಂದಲೇ ಮೃತಪಟ್ಟಿದ್ದರು. ಇದೀಗ ಇವರು ಕೂಡ ಅದರಿಂದಲೇ ಮೃತಪಟ್ಟಿದ್ದಾರೆ. ಇದೇ ವಿಚಾರಕ್ಕೆ ನನಗೆ ಬಹಳ ದುಃಖವಾಗುತ್ತದೆ ಅಂದ್ರು.ನಾನೆಂದೂ ಮರೆಯಲಾರದ ಅನಂತಕುಮಾರ್ ಜೀ, ಇನ್ನು ನಿಮ್ಮ ನೆನಪು ಮಾತ್ರ ಅನಂತ…..￰ನಮ್ಮನ್ನೆಲರನ್ನು ಅಗಲಿದ ನನ್ನ ನೆಚ್ಚಿನ ಗುರು, ಮಾರ್ಗದರ್ಶಿ ಹಾಗೂ ಅಣ್ಣನಂತಿದ್ದ ಅನಂತಕುಮಾರ್ ಜೀ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಪಡೆದು, ನನ್ನ ಅನಂತ ಅನಂತ ಗೌರವ ನಮನಗಳನ್ನು ಸಲ್ಲಿಸಿದೆನು. #AnanthKumar ???? pic.twitter.com/UPCMPnaTcE— Pralhad Joshi (@JoshiPralhad) November 12, 2018ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


