ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಚರಿಸುತ್ತಿರುವ ಟಿಪ್ಪು ಜಯಂತಿಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಗೈರಾಗಿದ್ದಾರೆ.ಜಿ.ಪರಮೇಶ್ವರ್ ಅವರು ಸಿಂಗಾಪುರಕ್ಕೆ ತೆರಳಿದ್ದು, ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಹೀಗಾಗಿ ಅವರ ಬದಲಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರೇ ಕಾರ್ಯಕ್ರಮದ ನೇತೃತ್ವ ವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಸರ್ಕಾರದ ಪರವಾಗಿ ಆಯೋಜಿಸಿದ್ದ ಟಿಪ್ಪು ಜಯಂತಿಗೆ ನಾನು ಬರಲು ಆಗುವುದಿಲ್ಲ ಅಂತಾ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಹೀಗಾಗಿ ಆಮಂತ್ರಣ ಪತ್ರಿಕೆಯಲ್ಲಿ ಅವರ ಹೆಸರನ್ನು ಬಿಡಲಾಗಿತ್ತು. ಆದರೆ ಈಗ ಪಿ.ಪರಮೇಶ್ವರ್ ಅವರು ಟಿಪ್ಪು ಜಯಂತಿಯಿಂದ ದೂರ ಸರಿದಿದ್ದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ರಾಜಕೀಯ ಜಂಜಾಟದಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೊಂಚ ಬಿಡುವು ಪಡೆದುಕೊಂಡಿದ್ದು, ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಹೀಗಾಗಿ ಅರಣ್ಯ ಪ್ರದೇಶಕ್ಕೆ ತೆರಳಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿಎಂ ಅವರು 3 ದಿನ ವಿಶ್ರಾಂತಿಗೆ ತೆರಳಿದ್ದಾರೆ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ ವಿಶ್ರಾಂತಿ ಗೃಹವೊಂದರಲ್ಲಿ 3 ದಿನ ವಾಸ್ತವ್ಯ ಹೂಡಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯವರು ತಮ್ಮ ಪತ್ನಿ ಹಾಗೂ ಪುತ್ರ ನಿಖಿಲ್ ಜೊತೆ ಅಲ್ಲಿಗೆ ತೆರಳಿದ್ದಾರೆ. ವಿಶ್ರಾಂತಿ ಪಡೆದ ಬಳಿಕ ಅಂದರೆ ನವೆಂಬರ್ 11 ರ ಸಂಜೆ ರಾಜಧಾನಿಗೆ ವಾಪಸ್ಸಾಗಲಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


