ಬೆಂಗಳೂರು: ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಸಿಸಿಬಿ ಪೊಲೀಸರ ಮುಂದೆ ಇಂದು ಹಾಜರಾಗಿದ್ದಾರೆ. ನ್ಯಾಯಾಲಯ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ಹಿನ್ನೆಲೆಯಲ್ಲಿ ಇಂದು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಪಬ್ಲಿಕ್ ಟಿವಿ ಜೊತೆ ಮಾತನಾಡುವ ವೇಳೆ ಶಾಸಕ ಸೋಮಶೇಖರ್ ರೆಡ್ಡಿ, ಜನಾರ್ದನ ರೆಡ್ಡಿ ಬೆಂಗಳೂರಿನಲ್ಲಿಯೇ ಇದ್ದಾರೆ ಎಂಬ ಮಾಹಿತಿಯನ್ನು ಹೊರ ಹಾಕಿದ್ದರು. ಇಂದು ಮಧ್ಯಾಹ್ನ 3 ಗಂಟೆಗೆ ಸಿಸಿಬಿ ಕಚೇರಿಗೆ ಆಗಮಿಸಿದರು.ಜನಾರ್ದನ ರೆಡ್ಡಿ ಕಳೆದ ನಾಲ್ಕು ದಿನಗಳಿಂದ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಇದ್ದಾರೆಂದು ಸಿಸಿಬಿ ಅಧಿಕಾರಿಗಳು ತಂಡದ ಸಮೇತ ಪರಿಶೀಲನೆ ನಡೆಸಿದ್ದರು. ಆದ್ರೆ ಸಿಸಿಬಿ ಅಧಿಕಾರಿಗಳು ಬಂಧನದ ಮಾಹಿತಿ ಹೊರ ಹಾಕಿದ ನಂತರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದಾರೆ ಎಂದು ಅಚ್ಚರಿಯ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.ವಿಚಾರಣೆಗೆ ಗೈರಾಗಿದ್ದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸುವ ಸಾಧ್ಯತೆಗಳಿವೆ. ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದರಿಂದ ಸೋಮವಾರ ಜಾಮೀನು ಸಿಗೋದು ಕಷ್ಟ ಎಂಬುದನ್ನು ವಕೀಲರು ಜನಾರ್ದನ ರೆಡ್ಡಿ ಅವರಿಗೆ ಮನವರಿಕೆ ಮಾಡಿದ್ದಾರಂತೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅಪರಾಧ ಕೇಂದ್ರ ವಿಭಾಗ ಕಚೇರಿಗೆ ಆಗಮಿಸಿ ಅಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಲಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


