ಚಿತ್ರದುರ್ಗ: ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಹೊಸದುರ್ಗ ತಾಲೂಕಿನ ಮಾಡದಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.ಗೊಲ್ಲರಹಟ್ಟಿ ನಿವಾಸಿ ಚಿದಾನಂದ(26) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ಶ್ರೀನಿವಾಸ, ಸುನಿಲ್, ಮಂಜ, ಪ್ರವೀಣ್ ಸೇರಿದಂತೆ ಏಳು ಜನರು ಹಲ್ಲೆ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ವೇಳೆ ಚಿದಾನಂದ ತಾಯಿ ಸಿದ್ದಮ್ಮ ಅವರ ಮೇಲೂ ಹಲ್ಲೆ ನಡೆದಿದೆ.ಆಗಿದ್ದೇನು?:
ಚಿದಾನಂದ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರಿಯುತ್ತಿದ್ದರು. ಇದನ್ನು ಸಹಿಸದ ಅದೇ ಗ್ರಾಮದ ಮತ್ತೊಂದು ಕೋಮಿನ ಯುವಕರು ಇಂದು ಮದ್ಯ ಸೇವನೆ ಮಾಡಿ ಚಿದಾನಂದ ಮನೆಗೆ ಬಂದಿದ್ದರು. ಮನೆಯ ಮುಂದೆ ನಿಂತು ಸಿದ್ದಮ್ಮ ಅವರ ಜೊತೆಗೆ ಅಸಭ್ಯ ವರ್ತಿಸಿ, ನಿಂದಿಸಿದ್ದಾರೆ. ಈ ವೇಳೆ ಚಿದಾನಂದ ಮಧ್ಯ ಪ್ರವೇಶಿಸುತ್ತಿದ್ದಂತೆ ಅವರ ತಲೆಗೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.ಘಟನೆಯಿಂದಾಗಿ ಚಿದಾನಂದ ಅವರ ಎದೆಗೆ ಬಲವಾದ ಪೆಟ್ಟು ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿದೆ. ಇದನ್ನು ತಡೆಯಲು ಬಂದಿದ್ದ ಸಿದ್ದಮ್ಮ ಅವರಿಗೂ ದುಷ್ಕರ್ಮಿಗಳು ಹೊಡೆದಿದ್ದಾರೆ. ಈ ವೇಳೆ ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಅಲ್ಲಿಂದ ಯುವಕರು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳು ಚಿದಾನಂದ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.ಮಗನ ಶೈಕ್ಷಣಿಕ ಹಾಗೂ ಆರ್ಥಿಕಾಭಿವೃದ್ಧಿ ಸಹಿಸಲಾಗದೇ ಈ ಕೃತ್ಯ ಎಸಗಿದ್ದಾರೆ ಎಂದು ಚಿದಾನಂದ ತಾಯಿ ಸಿದ್ದಮ್ಮ ಆರೋಪಿಸಿದ್ದಾರೆ. ಹೊಸದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/Sign in to your account
Username or Email Address


Password

 Remember Me


