ಬೆಳಗಾವಿ: ಎಮ್ಮೆ ಓಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ವಾಗ್ದಾಳಿ ನಡೆದು, ಬಳಿಕ ಕಲ್ಲು ತೂರಾಟ ನಡೆದ ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಸರ್ದಾರ್ ಮೈದಾನದಲ್ಲಿ ನಡೆದಿದೆ.ದೀಪಾವಳಿ ಬಲಿಪಾಡ್ಯಮಿ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಪ್ರತಿ ವರ್ಷವೂ ಎಮ್ಮೆಗಳನ್ನು ಅಲಂಕಾರ ಮಾಡಿ, ಅವುಗಳನ್ನು ಓಡಿಸಲಾಗುತ್ತದೆ. ಹೀಗಾಗಿ ಸರ್ದಾರ್ ಮೈದಾನದಲ್ಲಿ ಇಂದು ಎಮ್ಮೆ ಓಡಿಸಲಾಗುತ್ತಿತ್ತು. ಇದನ್ನು ನೋಡಲು ಬೆಳಗಾವಿ ನಗರ ಹಾಗೂ ತಾಲೂಕಿನ ವಿವಿಧ ಹಳ್ಳಿಗಳಿಂದ ಸಾವಿರಾರು ಜನರು ಬಂದಿದ್ದರು.ಎಮ್ಮೆಗಳಿಗೆ ಮದ್ಯ ಕುಡಿಸಿ, ತಾವೂ ಕುಡಿದು ಯುವಕರು ಎಮ್ಮೆಗಳನ್ನು ಓಡಿಸುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಕಲ್ಲು ತೂರಾಡಿಕೊಂಡಿದ್ದಾರೆ.ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಲಘು ಲಾಠಿ ಚಾರ್ಚ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಹೋಗಿ 8ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.ಕಲ್ಲು ತಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 22 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


