ಬೆಂಗಳೂರು: ರಾಜ್ಯದ ಪಂಚಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿಯವರ ಹೇಳಿಕೆ ಸ್ವಲ್ಪ ಮಟ್ಟಿಗೆ ನಮಗೆ ತಿರುಗುಬಾಣವಾದರೆ, ರಾಮನಗರದಲ್ಲಿ ಮಹಾ ದ್ರೋಹ ನಡೆಯಿತು ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ಲೋಕಸಭಾ ಚುನಾವಣೆಗೆ ಉಪಚುನಾವಣೆ ಪರೀಕ್ಷೆ ಅಲ್ಲ. ಹಾಗೆಂದು ಮೈತ್ರಿ ಪಕ್ಷದ ಸಾಧನೆ ಈ ಚುನಾವಣೆಯಲ್ಲಿ ಇಲ್ಲ. ಈ ಉಪಚುನಾವಣೆಯಲ್ಲಿ ಸರ್ಕಾರ ಆಡಳಿತ ಯಂತ್ರದ ದುರುಪಯೋಗ ಮಾಡಿಕೊಂಡರೆ ಜನರು ಸರ್ಕಾರದ ಭರವಸೆಗಳನ್ನು ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ನಂಬುತ್ತಾರೆ. ಆದರೆ ಲೋಕಸಭಾ ಚುನಾವಣೆಯ ಪರಿಸ್ಥಿತಿಗಳೇ ಬೇರೆ. ಈ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ದೊಂಬರಾಟ ಮಾಡಿ ನಾಟಕದ ಫಲಿತಾಂಶ ಪಡೆದಿದೆ ಎಂದು ಕಿಡಿಕಾರಿದರು.ಉಪಚುನಾವಣೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ನೀಡಿರುವ ಆಪರೇಷನ್ ಕಮಲದ ಹೇಳಿಕೆ ಅಚ್ಚರಿ ಮೂಡಿಸಿದೆ ಎಂದು ತಿಳಿಸಿದ ಡಿವಿಎಸ್, ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿದೆ. ಸರ್ಕಾರದ ಗುಪ್ತಚರ ಇಲಾಖೆ ಅವರ ಕೈಯಲ್ಲಿಯೇ ಇರುತ್ತದೆ, ಯಾವ ಶಾಸಕ ಎಲ್ಲಿ ಹೋಗುತ್ತಾರೆ? ಯಾರನ್ನು ಭೇಟಿ ಮಾಡುತ್ತಾರೆ ಎಂಬ ಸಂಪೂರ್ಣ ಮಾಹಿತಿ ಅವರಿಗೆ ಸಿಗುತ್ತದೆ. ಹಾಗಿದ್ದರೂ ಅವರ ಶಾಸಕರನ್ನು ಹಿಡಿದಿಟ್ಟುಕೊಳ್ಳಲಾಗದೇ ಬಿಜೆಪಿ ಕಡೆ ಕೈ ತೋರಿಸಿದರೆ ಏನು ಹೇಳಲು ಸಾಧ್ಯ ಎಂದು ಪ್ರಶ್ನೆ ಮಾಡಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


