ಬೆಂಗಳೂರು: ಕರ್ನಾಟಕ ಲೋಕಸಭಾ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.ಉಪ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲಿಗೆ ನಾಡಿನ ಜನರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಬಳಿಕ ಮೈತ್ರಿ ಕೂಟದ ಶಾಸಕರಿಗೆ ಮತ್ತೆ ಬಿಜೆಪಿ ಆಮಿಷ ಒಡ್ಡುತ್ತಿದೆ. ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ಬಿಜೆಪಿ ನಾಯಕರು ನಮ್ಮ ನಾಯಕರಿಗೆ ಆಮಿಷ ಒಡ್ಡಿ ಕರೆ ಮಾಡಿದ್ದರು. ಸುಮಾರು 1 ಕೋಟಿ ರೂಪಾಯಿಗೆ ಬಿಜೆಪಿ ನಾಯಕರು ಆಮಿಷ ಒಡ್ಡಿದ್ದರು ಎಂದು ಹೇಳಿದ್ದಾರೆ.ತಮ್ಮ ಶಾಸಕರಿಗೆ ಆಮಿಷ ಒಡ್ಡಿದ್ದಾರೆ ಎಂದು ಹೇಳಿದ್ದಾರೆ. ಆದರೆ ಯಾವ ಶಾಸಕರ ಹೆಸರು ಹೇಳದೆ ಸಿಎಂ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಇದರಿಂದ ಈಗ ಮೈತ್ರಿ ಸರ್ಕಾರ ರಾಜಕಾರಣದಲ್ಲಿ ಮತ್ತೆ ಬಿಜೆಪಿ ಆಪರೇಷನ್ ಕಮಲವನ್ನು ಶುರುಮಾಡಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ.ಇದೇ ವೇಳೆ ಇವತ್ತಿನ ಉಪ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ಲೋಕಸಭೆಯಲ್ಲಿ 1 ಕಾಂಗ್ರೆಸ್ ಮತ್ತು ಜೆಡಿಎಸ್ 1 ಗೆದ್ದಿದ್ದಾರೆ. ಎರಡು ಕ್ಷೇತ್ರದಲ್ಲಿ ದಾಖಲೆಯ ಜಯವನ್ನು ಜನರು ನೀಡಿದ್ದಾರೆ. ಶಿವಮೊಗ್ಗದಲ್ಲಿ ಕೊನೆಯ ಹಂತದಲ್ಲಿ ಸಿದ್ಧತೆ ಇಲ್ಲದೆ ಇದ್ದರು ಕಾಂಗ್ರೆಸ್ ನಾಯಕರು ಒಮ್ಮತದಿಂದ ಮಧು ಬಂಗಾರಪ್ಪ ಕಣಕ್ಕೆ ಇಳಿಸಿದ್ವಿ. ಶಿವಮೊಗ್ಗ ಜನರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಶಿವಮೊಗ್ಗದಲ್ಲಿ ನೈತಿಕ ಗೆಲುವು ನಮಗೆ ಆಗಿದೆ. ಸೋತಿದ್ದರು ನಮಗೆ ಇದು ನೈತಿಕ ಗೆಲುವು. ನಾಲ್ಕು ಕ್ಷೇತ್ರದ ಗೆಲವು ಮೈತ್ರಿ ಸರ್ಕಾರಕ್ಕೆ ಶಕ್ತಿ ನೀಡಿದೆ. ಮೈತ್ರಿ ಬಗ್ಗೆ ಬಿಜೆಪಿ ಆರೋಪ ಮಾಡುತ್ತಿತ್ತು. ಈ ಉಪಚುನಾವಣೆಯ ಫಲಿತಾಂಶದ ಮೂಲಕ ಅವರಿಗೆ ಜನರೆ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


