ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಚೈತ್ರಾಳಿಗೆ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದ್ದಾರೆ.ಎರಡು ದಿನದ ಹಿಂದೆ ಚೈತ್ರಾ ಕುಂದಾಪುರ ಕೋರ್ಟ್ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಚೈತ್ರಾ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಳು. ಮಂಗಳೂರಿನ ಸಬ್ ಜೈಲಿನ ಸೂಪರಿಂಟೆಂಡೆಂಟ್ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂದು ಕೋರ್ಟ್ ಗೆ ಹೇಳಿಕೆ ನೀಡಿದ್ದರು.ಇಂದಿನ ವಿಚಾರಣೆ ವೇಳೆ ಆದೇಶವಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೇ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಕ್ಕೆ ಜಡ್ಜ್ ಚೈತ್ರಳಿಗೆ ತಪರಾಕಿ ಹಾಕಿದ್ದಾರೆ. ನ್ಯಾಯಾಲಯಕ್ಕೆ ಅವಮಾನ ಮಾಡಿದ್ದಕ್ಕೆ ಜಡ್ಜ್ ಚೈತ್ರಾಳಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ. ಹೀಗಾಗಿ ಚೈತ್ರಾ ನ್ಯಾಯಾಂಗ ಬಂಧನದ ಅವಧಿ ನವೆಂಬರ್ 19ರವರೆಗೆ ಮುಂದುವರಿಯಲಿದೆ.ಏನಿದು ಪ್ರಕರಣ?
ಕಳೆದ ಎರಡು ತಿಂಗಳಿಂದ ವಿವಾದಕ್ಕೆ ಕಾರಣವಾಗಿದ್ದ ಸುಬ್ರಹ್ಮಣ್ಯ ಮಠ ಮತ್ತು ದೇವಸ್ಥಾನದ ಸಂಘರ್ಷ ನವರಾತ್ರಿಯ ಮಧ್ಯೆ ಮಠದ ಸ್ವಾಮೀಜಿ ಉಪವಾಸ ಕುಳಿತಿದ್ದು ದೊಡ್ಡ ರಾದ್ಧಾಂತಕ್ಕೆ ಎಡೆ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಹಾಗೆಯೇ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚೈತ್ರಾ ಕುಂದಾಪುರ ಮತ್ತು ಸುಬ್ರಹ್ಮಣ್ಯದ ಹುಡುಗರ ಮಧ್ಯೆ ಭಾರೀ ವಾಕ್ಸಮರ ನಡೆದಿತ್ತು.ಆ ಕಡೆಯಿಂದ ಕುಂದಾಪುರಕ್ಕೆ ಬಂದರೆ ನೋಡಿಕೊಳ್ತೀನಿ ಅಂದಿದ್ರೆ, ಈ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬಂದರೆ ನೋಡ್ತೀವಿ ಅಂತಾ ಸವಾಲು ಕೂಡ ಆಗಿತ್ತು. ಇತ್ತ ವಾಟ್ಸಪ್ ಸವಾಲು ಸ್ವೀಕರಿಸಿದ ಚೈತ್ರಾ ಕುಂದಾಪುರದ ತನ್ನ ಹುಡುಗರನ್ನು ಕಟ್ಟಿಕೊಂಡು ಸ್ವಾಮೀಜಿಯನ್ನು ಕಾಣುವ ನೆಪದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದಳು.ಈ ವಿಚಾರ ತಿಳಿದು ಚೈತ್ರಾಳನ್ನು ಪ್ರಶ್ನೆ ಮಾಡಲು ಬಂದಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿತ್ತು. ಬಳಿಕ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಂಗಳದಲ್ಲಿಯೇ ಬೀದಿ ಕಾಳಗ ನಡೆದಿತ್ತು. ಚೈತ್ರಾ ಮತ್ತು ಹುಡುಗರು ರಾಡ್ ಹಿಡ್ಕೊಂಡು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂಬಾತನ ಮೇಲೆ ಹಲ್ಲೆ ನಡೆಸಿದ್ದು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.ವಿಚಾರ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಲಾಠಿಚಾರ್ಜ್ ನಡೆಸಿ ಎರಡು ಗುಂಪನ್ನು ಚದುರಿಸಿದ್ದರು. ಸಂಜೆ ಹೊತ್ತಿಗೆ ಚೈತ್ರಾ ನಡೆಸಿದ ದರ್ಪ ಮತ್ತು ರಾಡಿನಲ್ಲಿ ಹಲ್ಲೆ ನಡೆಸಿದ್ದು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


