ಚಿಕ್ಕಮಗಳೂರು: ದಕ್ಷಿಣ ಕನ್ನಡದಿಂದ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ರಸ್ತೆ ದೊಡ್ಡ ಗ್ರಾನೈಟ್ ಕಲ್ಲು ರಸ್ತೆ ಅಡ್ಡಲಾಗಿ ಬಿದ್ದಿರುವ ಕಾರಣ ವಾಹನಗಳು ಆಮೆಗತಿಯಲ್ಲಿ ಸಾಗುತ್ತಿದೆ.ಮಂಗಳೂರಿನಿಂದ ಬೆಂಗಳೂರಿಗೆ ಎರಡು ಲಾರಿಗಳಲ್ಲಿ ದೊಡ್ಡ ಗ್ರಾನೈಟ್ ಕಲ್ಲುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಒಂದು ಲಾರಿಯಲ್ಲಿದ್ದ ಗ್ರಾನೈಟ್ ಕಲ್ಲು ಚಾರ್ಮಾಡಿಯ ಆರನೇ ತಿರುವಿನಲ್ಲಿ ಬಿದ್ದಿದೆ. ಚಾಲಕ ಲಾರಿ ಸಮೇತ ಪರಾರಿಯಾಗಿದ್ದು, ಚಾರ್ಮಾಡಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.ಭಾನುವಾರ ಸುಮಾರು ಐದು ಕಿ.ಮೀ. ಅಧಿಕ ಟ್ರಾಫಿಕ್ ಜಾಮ್ ಆಗಿತ್ತು. ಮುಖ್ಯವಾದ ಹಾಗೂ ದೊಡ್ಡ ತಿರುವಾಗಿದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಜೆಸಿಬಿ ಹಾಗೂ ಕ್ರೇನ್ ಮೂಲಕವೂ ಬಂಡೆ ಸರಿಸಲು ಪ್ರಯತ್ನಿಸುತ್ತಿದ್ದರೂ ಸಾಧ್ಯವಾಗಿಲ್ಲ.ಹಾಗಾಗಿ ರಸ್ತೆ ಬದಿಯ ಮಣ್ಣನ್ನು ತೆಗೆದು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಹಣ ಪಡೆದು ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡುತ್ತಿರುವ ಕಾರಣ ಈ ರೀತಿ ಸಮಸ್ಯೆಯಾಗುತ್ತಿದೆ ಎಂದು ಸ್ಥಳಿಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


