ಬೆಂಗಳೂರು: ಕರ್ನಾಟಕ ಉಪ ಚುನಾವಣೆಗೆ ಸ್ಫೋಟಕ ತಿರುವು ಸಿಕ್ಕಿದ್ದು, ರಾಮನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಎಲ್. ಚಂದ್ರಶೇಖರ್ ಚುನಾವಣೆ ಹಿಂದೆ ಸರಿಯುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.ಈ ವೇಳೆ ಮಾತನಾಡಿದ ಎಲ್.ಚಂದ್ರಶೇಖರ್, ನಾನು ಪಕ್ಷದ ಅಭ್ಯರ್ಥಿಯಾಗಿದ್ದರೂ, ಯಾವ ನಾಯಕರು ಪ್ರಚಾರಕ್ಕೆ ಬಂದಿಲ್ಲ. ನಾನು ಕ್ಷೇತ್ರದ ಅಭಿವೃದ್ಧಿಗಾಗಿ ರಾಮನಗರದ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದೆ. ಜನ ಹಿತಕ್ಕಾಗಿ ನಾನು ಬಿಜೆಪಿ ಸೇರ್ಪಡೆ ಆಗಿದ್ದೆ. ಚುನಾವಣಾ ವೆಚ್ಚವನ್ನು ಪಕ್ಷವೇ ನೋಡಿಕೊಳ್ಳುತ್ತೇವೆ. ನೀವು ಅಭ್ಯರ್ಥಿಯಾಗಿ ಸಾಕು, ನಮ್ಮ ಎಲ್ಲ ನಾಯಕರು ನಿಮ್ಮ ಪರವಾಗಿ ಬಂದು ಪ್ರಚಾರ ಮಾಡುತ್ತೇವೆ ಎಂದು ಹೇಳಿದ್ದರು. ನಾನು ಫೋನ್ ಮಾಡಿದ್ರೆ ಕಾಲ್ ರಿಸೀವ್ ಮಾಡಲ್ಲ ಅಂದ್ರೆ ನನ್ನನ್ನು ಎಷ್ಟು ನಿರ್ಲಕ್ಷ್ಯ ಮಾಡಿದ್ದಾರೆ ಎಂಬುವುದು ಗೊತ್ತಾಯಿತು. ಹಾಗಾಗಿ ಪಕ್ಷದಿಂದ ಹೊರ ಬಂದು ಕಾಂಗ್ರೆಸ್ ಸೇರ್ಪಡೆ ಆಗಿದ್ದೇನೆ ಎಂದು ಎಲ್.ಚಂದ್ರಶೇಖರ್ ಹೇಳಿದರು.ಇಂದು ಸಂಸದ ಡಿ.ಕೆ.ಸುರೇಶ್ ಸಮ್ಮುಖದಲ್ಲಿ ಎಲ್.ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಹಿಂದೆ ಸರಿದ ಕಾರಣ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ಆಯ್ಕೆಯಾಗುವದು ಬಹುತೇಕ ಖಚಿತವಾಗಿದೆ. ಚಂದ್ರಶೇಖರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಬೇರೆ ಕ್ಷೇತ್ರಗಳ ಮೇಲೆಯೂ ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


