ಶಿವಮೊಗ್ಗ: ಹಣ ಬಲದಿಂದ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ ಆಗಿರುವುದು ಉದಾಹರಣೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.ರಾಮನಗರ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಕುರಿತು ಮಾತನಾಡಿದ ಬಿ.ವೈ.ರಾಘವೇಂದ್ರ, ಈ ಹಿಂದೆ ಜೆಡಿಎಸ್ ನಾಯಕರು ಶಿವಮೊಗ್ಗಕ್ಕೆ ಬಂದಾಗ ಕೊನೆ ಗಳಿಗೆ ಏನು ಮಾಡ್ತೀವಿ ಅಂತಾ ಹೇಳಿ, ಈಗ ಅದೇ ರೀತಿ ನಡೆದುಕೊಂಡಿದ್ದಾರೆ. ಇದು ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳಿಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಾಠವಾಗಲಿದೆ ಎಂದು ತಿಳಿಸಿದ್ರು.ಶಿಕಾರಿಪುರ, ಸೊರಬ, ಸಾಗರದಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದೇವೆ. ಜೆಡಿಎಸ್ ಮುಖಂಡರು ಹಣ ಮತ್ತು ತೋಳ್ ಬಲದಿಂದ ನಮ್ಮ ಕಾರ್ಯಕರ್ತರನ್ನು ಖರೀದಿ ಮಾಡಲು ಮುಂದಾಗುತ್ತಿದ್ದಾರೆ. ನಾಡಿನ ಜನತೆ ಎಲ್ಲವನ್ನು ಗಮನಿಸಿ ಮುಂದಿನ ದಿನಗಳಲ್ಲಿ ಎಲ್ಲದಕ್ಕೂ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.ಈ ಮೊದಲು ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಮನಗರ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಅವರನ್ನು ಸಚಿವ ಡಿಕೆ ಶಿವಕುಮಾರ್ ಸಹೋದರರು ದುಡ್ಡು ಕೊಟ್ಟು ಖರೀದಿ ಮಾಡಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ. ಆದರೆ ರಾಮನಗರ ಅಭ್ಯರ್ಥಿ ಬಿಜೆಪಿ ಸೇರ್ಪಡೆ ಆಗಿರುವುದು ಪಕ್ಷದ ಮೇಲೆ ಹಾಗೂ ಉಪಚುನಾವಣೆ ಮೇಲೆ ಪರಿಣಾಮ ಬೀರುತ್ತಾ ಎಂಬ ಪ್ರಶ್ನೆಗೆ ಗರಂ ಆದ ಬಿಎಸ್‍ವೈ ಉತ್ತರಿಸದೇ ಮೈಕ್ ತಳ್ಳಿ ಹೋದರು.https://www.youtube.com/watch?v=SUz3348T4QA






 Advertisement 




Sign in to your account
Username or Email Address


Password

 Remember Me


