ಮಂಡ್ಯ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಮಂಡ್ಯ ಉಪಚುನಾವಣೆ ಕಣಕ್ಕೆ ಇಳಿದ ಎಲ್.ಆರ್.ಶಿವರಾಮೇಗೌಡ ಅವರನ್ನು ಬಿಜೆಪಿಯ ಅಭ್ಯರ್ಥಿ ಅಂತಾ ಕರಪತ್ರದಲ್ಲಿ ತಪ್ಪಾಗಿ ಮುದ್ರಿಸಲಾಗಿದೆ.ಮಂಡ್ಯ ಲೋಕಸಭೆ ಉಪಚುನಾವಣೆ ಪ್ರಚಾರದ ಕರ ಪತ್ರದಲ್ಲಿ ಎಡವಟ್ಟು ಮಾಡಲಾಗಿದ್ದು, ಇದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೀಗಾಗಿ ಕರಪತ್ರ ಮುದ್ರಿಸಿದ ಸಾಮಾಜಿಕ ನ್ಯಾಯ ಪರಿಷತ್ ರಾಜ್ಯಾಧ್ಯಕ್ಷ ಅನಂತರಾಯಪ್ಪ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪತ್ರದಲ್ಲಿ ಏನಿದೆ?:
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ದಲಿತರ ಹಾಗೂ ರೈತರ ಪರ ಕಾಳಜಿಯನ್ನು ಬೆಂಬಲಿಸುವುದಕ್ಕಾಗಿ ಬಿಜೆಪಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಮತ ನೀಡಲು ಮನವಿ ಎಂದು ಅನಂತರಾಯಪ್ಪ ಅವರು ಮುದ್ರಿಸಿದ್ದಾರೆ. ಇದನ್ನು ನೋಡಿದ, ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ. ಇದೇ ಕರಪತ್ರದಲ್ಲಿ ಬಿಜೆಪಿ ಅನೈತಿಕ ರಾಜಕಾರಣ ಮಾಡುತ್ತಿದೆ ಹಾಗೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮುಖಭಂಗ ಅನುಭವಿಸಿದ್ದಾರೆ ಎಂದು ಲೇವಡಿ ಮಾಡಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


