ಉಡುಪಿ: ನಾವು ಬಿಜೆಪಿಗಿಂತ ಒಳ್ಳೆಯ ಹಿಂದುತ್ವ ಪಾಲಿಸುತ್ತೇವೆ. ಹಿಂದುತ್ವದಲ್ಲಿ ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ನಾವಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.ಜಿಲ್ಲೆಯ ಬೈಂದೂರು ತಾಲೂಕು ತ್ರಾಸಿಯಲ್ಲಿ ಉಪಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿಲ್ಲ. ಸರ್ಕಾರದ ಯೋಜನೆಗಳಿಗೆ ಬೇಕಾಗುವಷ್ಟು ಹಣ ನಮ್ಮಲ್ಲಿದೆ. ಕರಾವಳಿ ಜನ ಹಿಂದುತ್ವಕ್ಕೆ ಬಲಿಯಾಗುತ್ತಿದ್ದಾರೆ. ಹಿಂದೂ- ಮುಸಲ್ಮಾನರು ಸಂಘರ್ಷಕ್ಕೆ ಒಳಗಾಗಬೇಡಿ. ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಡುತ್ತ ಬಿಜೆಪಿಯವರು ಚುನಾವಣೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.ನಾನು ದೈವಪ್ರೇರಿತ ಮುಖ್ಯಮಂತ್ರಿ. ಬಿಜೆಪಿ ನಾಯಕರು ಸರ್ಕಾರ ಬೀಳುವ ಕನಸಲ್ಲಿದ್ದಾರೆ. ನಮಗೆ ದೈವ ಪ್ರೇರಣೆ ಇದೆ. ನಾನು ಎಷ್ಟು ದಿನ ಅಧಿಕಾರದಲ್ಲಿ ಇರಬೇಕಂತ ದೇವರು ತೀರ್ಮಾನಿಸ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.ಉಪಚುನಾವಣೆ ನಂತರ ನಾನು ಮನೆಗೆ ಹೋಗಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದಂತೆ ಯಾವುದೂ ಆಗಲ್ಲ. ಚುನಾವಣೆ ನಂತರ ಬಡವರ ಮನೆಗೆ ಬಂದು ಚರ್ಚೆ ಮಾಡುತ್ತೇನೆ. ಉಪ ಚುನಾವಣೆಯಲ್ಲಿ ಅಪ್ಪ-ಮಕ್ಕಳನ್ನು ಸೋಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


