ಬಾಗಲಕೋಟೆ: ಜಮಖಂಡಿಯ ಚುನಾವಣಾ ಪ್ರಚಾರದ ವೇಳೆ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರಾಮ್ ದಾಸ್ ಅವರು ಹಣ ನೀಡುವ ಮೂಲಕ ನೀತಿಸಂಹಿತೆ ಉಲ್ಲಂಘನೆ ಮಾಡಿದ್ದಾರೆ.ಜಮಖಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ರಾಮ್‍ದಾಸ್ ಮನೆ ಮನೆ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಎದೆ ತುಂಬಿ ಹಾಡುವೆನು ಹಾಡಿದ ಗಾಯಕಿ ಶಾಂಭವಿ ಭಾರ್ಗವಿಯ ಮನೆಗೆ ಭೇಟಿ ನೀಡಿದ್ದರು. ಇದೇ ವೇಳೆ ಗಾಯಕಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದರು.ಸನ್ಮಾನದ ನಂತರ ಉಡುಗೊರೆ ನೀಡುವ ವೇಳೆ ಹಣವನ್ನು ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಶಾಸಕರು ಹಣ ನೀಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.ಶಾಂಭವಿ ಭಾರ್ಗವಿ ಖಾಸಗಿ ಚಾನೆಲ್‍ನ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಭಾಗಿಯಾಗಿ ಖ್ಯಾತಿಯನ್ನು ಗಳಿಸಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


