ರಾಮನಗರ: ಮಾಗಡಿ ಶಾಸಕ ಎ ಮಂಜುನಾಥ್ ರಿಂದ ತೆರವಾಗಿದ್ದ ಕುದೂರು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ವಾಪಾಸ್ಸು ತೆಗೆದುಕೊಳ್ಳಲು ಡೀಲ್ ನಡೆದಿದೆ ಎನ್ನುವ ಆರೋಪವೊಂದು ಕೇಳಿ ಬಂದಿದೆ.ಕುದೂರು ಜಿ.ಪಂ ನ ಬಿಜೆಪಿ ಅಭ್ಯರ್ಥಿಯಾಗಿ ಹೇಮಂತ್ ನಾಮಪತ್ರ ಸಲ್ಲಿಸಿದ್ರು. ಆದ್ರೆ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ಹಾಗೂ ತಾಲೂಕು ಅಧ್ಯಕ್ಷ ರಂಗಧಾಮಯ್ಯ ಒತ್ತಡ ಹೇರಿ ನಾಮಪತ್ರ ವಾಪಾಸ್ಸು ತೆಗೆದುಕೊಳ್ಳುವಂತೆ ಮಾಡಿದ್ದಾರೆ ಎನ್ನುವ ಆರೋಪ ಬಂದಿದೆ.ನಾಮಪತ್ರ ಸಲ್ಲಿಸುವುದು ಬೇಡ ಎಂದು ಜೆಡಿಎಸ್ ಮುಖಂಡರು ಧಮ್ಕಿ ಕೂಡ ಹಾಕಿದ್ರು. ಆನಂತರ ರುದ್ರೇಶ್ ಹಾಗೂ ರಂಗಧಾಮಯ್ಯ ಕಾಂಗ್ರೆಸ್- ಜೆಡಿಎಸ್ ನಾಯಕರ ಜೊತೆ ಡೀಲ್ ಮಾಡಿಕೊಂಡಿದ್ದಾರೆ. ಹಣ ನೀಡುವುದು ಬೇಡ ನಾನು ಬರಿಗೈನಲ್ಲೆ ಮತಯಾಚನೆ ಮಾಡುತ್ತೇನೆ ಎಂದರೂ ಬಿಡಲಿಲ್ಲ. ಹೀಗಾದ್ರೆ ಯಾಕೆ ಬೇಕು ಬಿಜೆಪಿ ಸಹವಾಸ ಮುಂದಿನ ದಿನಗಳಲ್ಲಿ ಬಿಜೆಪಿಯಿಂದ ದೂರ ಉಳಿಯುವುದಾಗಿ ನಾಮಪತ್ರ ಸಲ್ಲಿಸಿದ್ದ ಹೇಮಂತ್ ಸ್ನೇಹಿತನೋರ್ವನ ಬಳಿ ಅಳಲು ತೋಡಿಕೊಂಡಿದ್ದಾರೆ.ಇದೀಗ ಇಬ್ಬರು ಡೀಲ್ ವಿಚಾರದ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಬಿಜೆಪಿ ಮುಖಂಡರ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಕೇಳಿ ಬಂದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


