ರಾಮನಗರ: ವಿಧಾನಸಭೆಯ ಉಪಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಅತೃಪ್ತಗೊಂಡಿರುವ ಕೈ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಮಾಜಿ ನಗರಸಭೆ ಅಧ್ಯಕ್ಷ ರವಿಕುಮಾರ್ ಹಾಗೂ ಅಶೋಕ್ ಸೇರಿದಂತೆ ಹಲವು ಮುಖಂಡರು ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷರಾದ ಎಂ ರುದ್ರೇಶ್ ನಿವಾಸದಲ್ಲಿ ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ನಗರ ಸಭೆಯ ಅಧ್ಯಕ್ಷರಾಗಿದ್ದ ರವಿಕುಮಾರ್ ಅವರು ಈ ಹಿಂದೆಯೇ ಕಾಂಗ್ರೆಸ್ ರೆಬೆಲ್ ವಲಯದಲ್ಲಿ ಗುರುತಿಸಿಕೊಂಡಿದ್ದರು. ನಗರದ ಸಭೆಯ ಅಧ್ಯಕ್ಷರಾಗಿದ್ದ ವೇಳೆ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಲಾಗಿತ್ತು.ರಾಮನಗರ ಕಾಂಗ್ರೆಸ್ ವಲಯದಲ್ಲಿ ಮೈತ್ರಿ ರಾಜಕಾರಣ ಬಗ್ಗೆ ಕಾಂಗ್ರೆಸ್ ಮುಖಂಡರಲ್ಲೇ ಭಾರೀ ಅತೃಪ್ತಿ ಇದ್ದು, ಹಲವು ನಾಯಕರು ಪಕ್ಷ ತೊರೆಯುವ ನಿರ್ಧಾರ ಮಾಡುತ್ತಿರುವ ಕಾರಣ ಮತ ವಿಭಜನೆ ಆಗುವ ಸಾಧ್ಯತೆ ಇದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬಂದಿದೆ. ಕೈ ನಾಯಕರ ಸೇರ್ಪಡೆಯ ಕಾರ್ಯಕ್ರಮದಲ್ಲಿ ಸಿಪಿ ಯೋಗೇಶ್ವರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


