ಬಳ್ಳಾರಿ: ಉಪಚುನಾವಣೆಯ ಮಿನಿಸಮರದಲ್ಲಿ ಜಾತಿ ರಾಜಕಾರಣದ ಕುರಿತು ಹೇಳಿಕೆ ನೀಡಿದ್ದ ಶಾಸಕ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.ಶ್ರೀರಾಮುಲು ಅವರು ಚುನಾವಣೆಯಲ್ಲಿ ಜಾತಿ ಬೀಜ ಬಿತ್ತುತ್ತಿದ್ದಾರೆ ಎಂದು ತಕರಾರು ತೆಗೆದಿರುವ ಉಗ್ರಪ್ಪ ಅವರು ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ರಾಮಪ್ರಸಾದ್ ಮನೋಹರ್ ಅವರಿಗೆ ಮೌಖಿಕ ದೂರು ನೀಡಿದ್ದಾರೆ. ಇಂದು ನಾಮಪತ್ರ ಪರಿಶೀಲನೆ ಹಿನ್ನೆಲೆಯಲ್ಲಿ ಉಗ್ರಪ್ಪ ಅವರು ಚುನಾವಣಾ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಚುನಾವಣಾ ಅಧಿಕಾರಿಗಳ ಎದುರು ಶ್ರೀರಾಮುಲು ಹೇಳಿಕೆ ಪ್ರಸ್ತಾಪ ಮಾಡಿರುವ ಉಗ್ರಪ್ಪ ಅವರು, ಜಾತಿ ಜಾತಿಗಳ ನಡುವೇ ವಿಷ ಭೀಜ ಬೀತ್ತುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಶ್ರೀರಾಮುಲು ಅವರು ಮತ್ತೊಮ್ಮೆ ಇಂತಹ ಹೇಳಿಕೆ ನೀಡಿದರೆ ಲಿಖಿತ ರೂಪದಲ್ಲಿ ದೂರು ನೀಡುವುದಾಗಿ ಉಗ್ರಪ್ಪ ಅವರು ತಿಳಿಸಿದ್ದಾಗಿ ಮಾಹಿತಿ ಲಭಿಸಿದೆ. ಉಗ್ರಪ್ಪ ಅವರಿಂದ ಈ ಕುರಿತು ದೂರು ಬಂದಿರುವುದನ್ನು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಬಳ್ಳಾರಿ ಲೋಕಸಭಾ ಉಪಚುನಾವಣೆಯ ಪ್ರಚಾರದ ವೇಳೆ ಶ್ರೀರಾಮುಲು ಅವರು ಶೋಷಿತ ಜಾತಿಯನ್ನು ತುಳಿಯಲಾಗುತ್ತಿದೆ ಎಂದು ಆರೋಪ ಮಾಡಿದ್ದರು. ಅಲ್ಲದೇ ಕಾಂಗ್ರೆಸ್ ಮುಖಂಡರಾದ ಸಚಿವ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.ಇತ್ತ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಜೆ ಶಾಂತಾ ಪರವಾಗಿ ಸಹೋದರ, ಶಾಸಕ ಶ್ರೀರಾಮುಲು ಬಿರುಸಿನ ಪ್ರಚಾರ ನಡೆಸಿದರು. ಇದಕ್ಕೂ ಮೊದಲು ಮೈಲಾರದ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿ ತಾವೂ ಸಂಸದರಾದ ವೇಳೆ ರಾಜ್ಯದ ಎಲ್ಲ ಸಂಸದರ ಪೈಕಿ ಅನುದಾನ ಬಳಕೆಯಲ್ಲಿ ನಂಬರ್ ಒನ್ ಆಗಿದ್ದು, ಮುಂದಿನ ದಿನಗಳಲ್ಲಿ ಶಾಂತಾ ಅವರನ್ನು ಗೆಲ್ಲಿಸಿದರೆ ಇನ್ನೂ ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


