ಬೆಂಗಳೂರು: ಜನಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಯಾವಾಗಲೂ ರೆಬಲ್ ಆಗಿದ್ದವರು. ಈಗ ಕರ್ನಾಟಕ ಉಪಚುನಾವಣೆಯಲ್ಲಿ ತುಂಬಾ ತಾಳ್ಮೆಯಿಂದ ಇದ್ದಾರೆ.ರಾಜ್ಯದಲ್ಲಿ ಎಲ್ಲೆ ಉಪಚುನಾವಣೆ ನಡೆದರು ಕೂಡ ಅದರ ಉಸ್ತುವಾರಿಯನ್ನು ಡಿ.ಕೆ. ಶಿವಕುಮಾರ್ ಅವರಿಗೆ ವಹಿಸಲಾಗುತ್ತಿತ್ತು. ಯಾಕೆಂದರೆ ಎಂತಹ ಸಂಕಷ್ಟ ಪರಿಸ್ಥಿತಿ ಎದುರಾದರೂ ಪಕ್ಷವನ್ನು ಡಿಕೆಶಿ ಅವರು ಗೆಲ್ಲಿಸಿಕೊಡುತ್ತಿದ್ದರು.ಈ ಹಿಂದೆ ಕೂಡ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದ ಉಪಸಮರದಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದರು. ಅಷ್ಟೇ ಅಲ್ಲದೇ ಬಳ್ಳಾರಿ ಗ್ರಾಮಾಂತರ ಎಂಬ ಬಿಜೆಪಿ ಕೋಟೆಯಲ್ಲಿ ಹಸ್ತದ ಬಾವುಟ ಹಾರಿಸಿದ್ದರು. ಗುಂಡ್ಲುಪೇಟೆ ಉಪಸಮರದಲ್ಲಿ ಕಮಲ ಮುದುಡಿಸಿ ಡಿಕೆಶಿ ಅವರು ಕಾಂಗ್ರೆಸ್ಸನ್ನು ಗೆಲ್ಲಿಸಿದ್ದರು.ಈಗ ಡಿ.ಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ಬಳ್ಳಾರಿ ಉಪಚುನಾವಣೆಯ ಅಖಾಡಕ್ಕೆ ಇಳಿಸಿದ್ದಾರೆ. ಶಾಸಕ ಶ್ರೀರಾಮುಲು ಜಾತಿ ಅಸ್ತ್ರಕ್ಕೆ ಸಚಿವ ಡಿಕೆಶಿಯಿಂದ ಯಾರು ನಿರೀಕ್ಷೆ ಮಾಡದ ಅಣ್ಣಾಸ್ತ್ರ ಪ್ರಯೋಗ ಮಾಡುತ್ತಿದ್ದು, ನಾಯಕ ವರ್ಸಸ್ ಗೌಡ ಎಂದು ಬಿಂಬಿಸಿ ಸಿಂಪತಿ ಗಿಟ್ಟಿಸುವ ರಾಮುಲು ಯತ್ನಕ್ಕೆ `ಅಣ್ಣ’ ಪ್ರತ್ಯಸ್ತ್ರ ಮಾಡುತ್ತಿದ್ದಾರೆ ಎಂದು ಪಕ್ಷದ ಮೂಲದಿಂದ ತಿಳಿದು ಬಂದಿದೆ.ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಶಿವಮೊಗ್ಗ ಮತ್ತು ಬಳ್ಳಾರಿಯನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಭಾರೀ ಚಕ್ರವ್ಯೂಹವನ್ನೇ ರಚಿಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಆಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಉಪ ಚುನಾವಣೆ ಪ್ರತಿಷ್ಠೆಯ ಕಣವಾಗಿ ಹೊರ ಹೊಮ್ಮಿದೆ. ಇತ್ತ ಶಾಸಕ ಶ್ರೀರಾಮುಲು ಸಹ ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಲು ಸಜ್ಜಾಗಿದ್ದಾರಂತೆ.ಇತ್ತ ಶಿವಮೊಗ್ಗವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಮೈತ್ರಿ ಸರ್ಕಾರ ಮಾಜಿ ಸಿಎಂ ಯಡಿಯೂರಪ್ಪರ ಪುತ್ರ ಬಿ.ವೈ.ರಾಘವೇಂದ್ರರನ್ನು ಸೋಲಿಸಿ ಬಿಜೆಪಿಗೆ ಮುಖಭಂಗ ಮಾಡಲು ರಾಜಕೀಯ ರೂಪರೇಷಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ರೂಪಿಸುತ್ತಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


