ಬೆಂಗಳೂರು: ಹಾಸನ ಜಿಲ್ಲೆಯ ಸರ್ಕಾರಿ ಶಾಲೆಗೆ ಮೂಲಸೌಕರ್ಯ ಒದಗಿಸಲು ನಟಿ ಪ್ರಣಿತಾ ಸುಭಾಷ್ 5 ಲಕ್ಷ ರೂ. ಸಹಾಯ ಧನ ನೀಡಿದ್ದು, ಶಾಲೆಯನ್ನು ದತ್ತು ತೆಗೆದುಕೊಳ್ಳಲು ಮುಂದಾಗಿದ್ದಾರೆ.ಸರ್ಕಾರಿ ಶಾಲೆ ಉಳಿಸಿ ಆಂದೋಲನ ಸಮಿತಿ ಇಂದು ಸುದ್ದಿಗೋಷ್ಠಿ ಆಯೋಜಿಸಿತ್ತು. ಈ ವೇಳೆ ಸಮಿತಿಯ ರಾಜ್ಯ ಶಿಕ್ಷಣ ರಾಯಭಾರಿಯನ್ನಾಗಿ ನಟಿ ಪ್ರಣಿತಾ ಅವರನ್ನು ನೇಮಕ ಮಾಡಲಾಯಿತು. ಜವಾಬ್ದಾರಿ ಹೊತ್ತ ಪ್ರಣಿತಾ ಹಾಸನ ಜಿಲ್ಲೆಯ ಸರ್ಕಾರಿ ಶಾಲೆಯೊಂದನ್ನು ದತ್ತು ತೆಗೆದುಕೊಳ್ಳುವ ಭರವಸೆ ನೀಡಿದರು. ಅಷ್ಟೇ ಅಲ್ಲದೆ ಆ ಶಾಲೆಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸಲು 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಈ ಹಿಂದೆ ನಾನು ಟೀಚ್ ಫಾರ್ ಚೇಂಚ್ ಆಂದೋಲನದಲ್ಲಿ ಭಾಗಿಯಾಗಿದ್ದೆ. ಕೆಲ ಸರ್ಕಾರಿ ಶಾಲೆಗೆ ಹೋಗಿ ಮಕ್ಕಳಿಗೆ ಪಾಠ ಮಾಡಿದಾಗ ಅಲ್ಲಿನ ನೈಜ ಸ್ಥಿತಿ ಅರ್ಥವಾಯಿತು. ಮೂಲಸೌಲಭ್ಯಗಳಿಲ್ಲದೇ ಸರ್ಕಾರಿ ಶಾಲೆಗಳು ಸೊರಗುತ್ತಿವೆ. ಶಾಲೆಯಲ್ಲಿ ಶೌಚಾಲಯಗಳೇ ಇರಲಿಲ್ಲ. ಇದರಿಂದಾಗಿ ವಿದ್ಯಾರ್ಥಿಯರೂ ಪರದಾಡುವಂತಾಗುತ್ತಿತ್ತು. ಈ ದುಸ್ಥಿತಿಯನ್ನು ಅರಿತು ನಾನು ಶಾಲೆಯನ್ನು ದತ್ತು ತೆಗೆದುಕೊಳ್ಳುವ ನಿರ್ಧಾರಕ್ಕೆ ಮುಂದಾಗಿರುವೆ ಎಂದು ಹೇಳಿದ್ದಾರೆ.ಮೀಟೂ ಅಭಿಯಾನದ ಮೂಲಕ ಮಹಿಳೆಯರಿಗೆ ಧ್ವನಿ ಸಿಕ್ಕಿದೆ. ಎಲ್ಲರೂ ಧೈರ್ಯವಾಗಿ ಮಾತನ್ನ ಹೊರಹಾಕುತ್ತಿದ್ದಾರೆ. ಆದರೆ ಸಿನಿಮಾ ರಂಗದಲ್ಲಿ ನನಗೆ ಯಾವುದೇ ರೀತಿಯ ಲೈಂಗಿಕ ಕಿರುಕುಳದ ಅನುಭವವಾಗಿಲ್ಲ ಎಂದು ಹೇಳಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


