ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಭಾನುವಾರ ಮಧ್ಯರಾತಿಯೇ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.ಶಿವರಾಜ್‍ಕುಮಾರ್ ಅವರು ಜ್ವರ ಮತ್ತು ಕೆಮ್ಮುನಿಂದ ಬಳಲುತ್ತಿದ್ದರು. ಆದ್ದರಿಂದ ರಾತ್ರಿಯೇ ಶಿವರಾಜ್ ಕುಮಾರ್ ಅವರನ್ನು ನಗರದ ಮಲ್ಯ ಆಸ್ಪತ್ರೆಗೆ ಕುಟುಂಬದವರು ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿರುವ ಶಿವಣ್ಣನ ಜೊತೆ ಕುಟುಂಬದವರು ಇದ್ದಾರೆ.ಸದ್ಯಕ್ಕೆ ಶಿವರಾಜ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಟ ವಿನಯ್ ರಾಜ್ ಕುಮಾರ್ ತಮ್ಮ ಚಿಕ್ಕಪ್ಪನ ಆರೋಗ್ಯವನ್ನು ವಿಚಾರಿಸಿದ್ದಾರೆ. ಭಾನುವಾರ ಸಂಜೆ ಸಿಎಂ ಕುಮಾರಸ್ವಾಮಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಶಿವರಾಜ್‍ಕುಮಾರ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಅಭ್ಯರ್ಥಿ ಮಧು ಬಂಗಾರಪ್ಪ ಪರ ಚುನಾವಣೆ ಪ್ರಚಾರದಲ್ಲಿ ದಂಪತಿ ಸಮೇತ ಭಾಗಿಯಾಗುತ್ತೇವೆ ಅಂತಾ ಭರವಸೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು.ಸದ್ಯ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಶಿವರಾಜ್‍ಕುಮಾರ್ ಜೆಡಿಎಸ್ ಪರ ಚುನಾವಣೆ ಪ್ರಚಾರ ನಡೆಸುವುದು ಅನುಮಾನ ಎಂದು ಹೇಳಲಾಗುತ್ತಿದೆ. ಇಂದು ಅಥವಾ ಮಂಗಳವಾರ ಮಧು ಬಂಗಾರಪ್ಪ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೊದಲು ಜೆಡಿಎಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‍ಕುಮಾರ್ ಅವರನ್ನೇ ಕಣಕ್ಕೆ ಇಳಿಸಲಾಗುತ್ತೆ ಎನ್ನಲಾಗುತ್ತಿತ್ತು. ಚುನಾವಣೆಗೆ ಶಿವರಾಜ್‍ಕುಮಾರ್ ದಂಪತಿ ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಮಧು ಬಂಗಾರಪ್ಪ ಅವರಿಗೆ ಟಿಕೆಟ್ ಲಭಿಸಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


