ರಾಮನಗರ: ಕಾರ್ಯಕರ್ತರ ಭಾವನೆಯ ಮೇರೆಗೆ ಅನಿತಾ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಈ ದಿನದ ಬೆಳವಣಿಗೆಗೆ ಕ್ಷೇತ್ರದ ಜನರೇ ಕಾರಣ. ಕಾರ್ಯಕರ್ತರ ಭಾವನೆ ಮೇರೆಗೆ ಅನಿತಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಆದರೆ ಕೆಲವರು ಬೇರೆಯವರಿಗೆ ಟಿಕೆಟ್ ಕೊಡಲಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಾನು ಇಲ್ಲಿಗೆ ಬಾರದೇ ಇದ್ದರೂ ಜನ ನನ್ನನ್ನು ಗೆಲ್ಲಿಸಿದ್ದಾರೆ. ರಾಮನಗರಕ್ಕೆ ರಾಜೀನಾಮೆ ಕೊಡುವ ಮುನ್ನ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರು ನಿಮ್ಮ ಕುಟುಂಬದವರೇ ಮುಂದಿನ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಮಾತು ತೆಗೆದುಕೊಂಡಿದ್ದರು. ಹೀಗಾಗಿ ಅನಿವಾರ್ಯವಾಗಿ ಅನಿತಾ ಸ್ಪರ್ಧೆ ಮಾಡಬೇಕಾಯಿತು ಎಂದು ಸ್ಪಷ್ಟನೆ ನೀಡಿದರು.  ಈ ಚುನಾವಣೆಗೆ ಕೆಲವು ಕಾಂಗ್ರೆಸ್ ಮುಖಂಡರಲ್ಲಿ ಅಸಮಧಾನವಿದೆ. ಏಕೆಂದರೆ ಮೊದಲಿನಿಂದಲೂ ಜಿಲ್ಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಜಿದ್ದಾ-ಜಿದ್ದಿನಿಂದಲೇ ಚುನಾವಣೆಯನ್ನು ಎದುರಿಸಿದ್ದವು. ಹೀಗಾಗಿ ಕೆಲವು ನಾಯಕರಲ್ಲಿ ಮಾತ್ರ ಅಸಮಾಧಾನವಿದೆ. ಮುಂದಿನ ರಾಜಕೀಯ ಪರಿಸ್ಥಿತಿಯನ್ನು ಬದಲಾವಣೆ ತರಲು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡರು ಎಲ್ಲಾ ಮುಖಂಡರ ಸಹಮತದಿಂದ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ ಎಂದು ಹೇಳಿದರು.ಮೈತ್ರಿ ಮೂಲಕ ಹೊಸ ಪ್ರಯೋಗಕ್ಕೆ ಸುಗಮ ಹೆಜ್ಜೆ ಇಟ್ಟಿದ್ದೇವೆ. ಹಳೇ ದ್ವೇಷ ಮರೆತು ಹೊಸ ಹೆಜ್ಜೆ ಹಾಕಿದ್ದೇವೆ. ಅಲ್ಲದೇ ಕಾಂಗ್ರೆಸ್ಸಿನವರೇ ಇರಲಿ, ಬಿಜೆಪಿಯವರೇ ಇರಲಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದೇನೆ. ಅಧಿಕಾರ ಇದೆ ಎಂದು ದುರ್ಬಳಕೆ ಮಾಡಿಕೊಂಡಿಲ್ಲ. ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತದ ವಿರುದ್ಧ ನಾವು ಕಾಂಗ್ರೆಸ್ ಜೊತೆ ಇದ್ದೇವೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ನಾಯಕರೂ ಸಹ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


