ಚಿಕ್ಕಮಗಳೂರು: ಎರಡು ದಿನಗಳಿಂದ ಮನೆಯೊಳಗೆ ಅವಿತು ಕುಳಿತಿದ್ದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಪ್ರಶಾಂತ್ ಎಂಬವರ ಮನೆಯ ಆವರಣದಲ್ಲಿ ಎರಡು ದಿನಗಳಿಂದ ಕಾಳಿಂಗ ಬೀಡುಬಿಟ್ಟಿತ್ತು. ಸರ್ಪಗಳು ಒಂದೇ ಜಾಗದಲ್ಲಿ ಇರೋದಿಲ್ಲ ಹೋಗುತ್ತದೆ ಎಂದು ಪ್ರಶಾಂತ್ ಮನೆಯವರು ಕೂಡ ಸುಮ್ಮನಾಗಿದ್ದರು. ಆದರೆ ಎರಡು ದಿನವಾದರೂ ಕಾಳಿಂಗ ಸರ್ಪ ಜಾಗ ಖಾಲಿ ಮಾಡಿರಲಿಲ್ಲ.ಈ ಹಿನ್ನೆಲೆಯಲ್ಲಿ ಪ್ರಶಾಂತ್ ಉರಗ ತಜ್ಞ ಹರೀಂದ್ರಾಗಿ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹರೀಂದ್ರ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ, ಗಿಡಗಂಟೆ ಹಾಗೂ ಪೈಪ್ ಒಳಗೆ ಹೋಗಲು ಯತ್ನಿಸುತ್ತಿದ್ದ ಕಾಳಿಂಗನನ್ನ ಒಂದು ಗಂಟೆಗಳ ನಿರಂತರ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿದಿದ್ದಾರೆ.ಸೆರೆ ಹಿಡಿದಿದ್ದ ಕಾಳಿಂಗ ಸರ್ಪವನ್ನು ಸ್ಥಳೀಯ ಅರಣ್ಯಕ್ಕೆ ಬಿಟ್ಟಿದ್ದಾರೆ. ಇತ್ತ ಎರಡು ದಿನಗಳಿಂದ ಮನೆಯೊಳಗೆ ಅವಿತು ಕುಳಿತಿದ್ದ ಬೃಹತ್ ಕಾಳಿಂಗನನ್ನ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


