ಮೈಸೂರು: ನಾಡಹಬ್ಬ ದಸರಾಗೆ ಚಾಲನೆ ಸಿಕ್ಕಾಗಿನಿಂದಲೂ ಅರಮನೆ ನಗರಿಯಲ್ಲಿ ದಿನಕ್ಕೊಂದು ಸ್ಪರ್ಧೆಗಳು ಗಮನಸೆಳೆಯುತ್ತಲೇ ಇದ್ದು, ಇಂದು ನಗರದ ಸ್ಕೌಟ್ಸ್-ಗೈಡ್ಸ್ ಮೈದಾನದಲ್ಲಿ ಆಯೋಜಿಸಿದ್ದ ಬಾಳೆಹಣ್ಣು ತಿನ್ನುವ ಸ್ಪರ್ಧೆ ಜನರಿಗೆ ಮನರಂಜನೆ ನೀಡಿತ್ತು.ಬಾಳೆ ಹಣ್ಣು ತಿನ್ನುವ ಸ್ಪರ್ಧೆಯನ್ನು ಮೂರು ವಿಭಾಗಗಳಲ್ಲಿ ಆಯೋಜಿಸಲಾಗಿತ್ತು. ಮೊದಲನೆಯದಾಗಿ ಪ್ರೌಢಶಾಲಾ ವಿದ್ಯಾರ್ಥಿಗಳು, ನಂತರ ಪುರುಷರು ಹಾಗೂ ಮಹಿಳೆಯರನ್ನು ಪ್ರತ್ಯೇಕವಾಗಿ ವಿಂಗಡಿಸಲಾಗಿತ್ತು. ಲಾಟರಿ ಮೂಲಕ ಪ್ರತಿ ವಿಭಾಗಗಳಲ್ಲಿ 10 ಮಂದಿ ಸ್ಪರ್ಧಿಸಿದ್ದರು. ಸ್ಪರ್ಧೆಗೆ ಪಚ್ ಬಾಳೆಯನ್ನು ಬಳಸಲಾಗಿತ್ತು.ಶಾಲಾ ಮಕ್ಕಳ ವಿಭಾಗದಲ್ಲಿ 1.10 ನಿಮಿಷದಲ್ಲಿ ನಾಲ್ಕು ಬಾಳೆಹಣ್ಣು ತಿನ್ನುವ ಮೂಲಕ ಪಿರಿಯಾಪಟ್ಟಣದ ಭರತ್ ಮೊದಲನೇ ಸ್ಥಾನ ಪಡೆದುಕೊಂಡರೆ, 1.15 ನಿಮಿಷಗಳ ಮೂಲಕ ಯುಕ್ತ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.ಪುರುಷರ ವಿಭಾಗದಲ್ಲಿ, 1.30 ನಿಮಿಷದಲ್ಲಿ 5 ಬಾಳೆಹಣ್ಣು ತಿಂದ ಮಹದೇವಸ್ವಾಮಿ ಪ್ರಥಮ ಸ್ಥಾನ ಗೆದ್ದರೆ, 1.45 ನಿಮಿಷಗಳ ಮೂಲಕ ಆಲಾಮ್ ಎರಡನೇ ಸ್ಥಾನ ಪಡೆದರು. ಅಲ್ಲದೇ ಮಹಿಳೆಯರ ವಿಭಾಗದಲ್ಲಿ ಪ್ರತಿಯೊಬ್ಬರಿಗೂ 4 ಬಾಳೆಹಣ್ಣುಗಳನ್ನು ನೀಡಲಾಗಿತ್ತು. 1.2 ನಿಮಿಷದಲ್ಲಿ ನಾಲ್ಕೂ ಬಾಳೆಹಣ್ಣು ತಿನ್ನುವ ಮೂಲಕ ಅಮೃತ ಪ್ರಥಮ ಸ್ಥಾನ ಪಡೆದರೆ, 1.8 ನಿಮಿಷದಲ್ಲಿ ತಿಂದ ಶೋಭಾ ಎರಡನೇ ಸ್ಥಾನ ಗಳಿಸಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


