ಮೈಸೂರು: ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಕೈ ಮಂತ್ರಿಗಳ ಹೆಸರನ್ನು ಪ್ರಸ್ತಾಪ ಮಾಡದಕ್ಕೆ ಸಮ್ಮಿಶ್ರ ಸರ್ಕಾರದ ಮೂವರು ಮಂತ್ರಿಗಳು ವೇದಿಕೆಯಿಂದಲೇ ಹೊರಡನಡೆದ ಪ್ರಸಂಗ ಇಂದು ನಡೆಯಿತು.ಮಕ್ಕಳ ದಸರಾ ಕಾರ್ಯಕ್ರಮ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಸಚಿವರಾದ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ ಹಾಗೂ ಶಿವಶಂಕರ್ ರೆಡ್ಡಿ ಭಾಗವಹಿಸಿದ್ದರು. ಈ ವೇಳೆ ಅಧಿಕಾರಿಗಳು ಸಚಿವ ಶಿವಶಂಕರ್ ಅವರ ಹೆಸರನ್ನು ಪ್ರಸ್ತಾಪಿಸಿರಲಿಲ್ಲ. ಇದರಿಂದ ಸಿಡಿಮಿಡಿಕೊಂಡ ಸಾ.ರಾ.ಮಹೇಶ್ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು. ಅಷ್ಟೇ ಅಲ್ಲದೇ ಉದ್ಘಾಟನೆ ನೆರವೇರುತ್ತಿದ್ದಂತೆ ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ.ಉದ್ಘಾಟನೆ ನೆರವೇರಿಸಿ, ನೀವೇ ಈ ಕಾರ್ಯಕ್ರಮ ಮಾಡಿಕೊಳ್ಳಿ ಎಂದು ಸಾರಾ ಮಹೇಶ್, ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ತಕ್ಷಣವೇ ಕಾರ್ಯಕ್ರಮದಿಂದ ಮೂವರು ಸಚಿವರು ಹೊರ ನಡೆದು. ಸಚಿವರ ದಿಢೀರ್ ನಿರ್ಧಾರದಿಂದ ಕಾರ್ಯಕ್ರಮದಲ್ಲಿ ಕೆಲ ಹೊತ್ತು ಭಾರೀ ಗೊಂದಲ ಉಂಟಾಯಿತು. ಕ್ಷಣಾರ್ಧದಲ್ಲಿಯೇ ಉದ್ಘಾಟನೆ ಕಾರ್ಯಕ್ರಮ ಮುಕ್ತಾಯಗೊಂಡಿತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


