ಮಂಗಳೂರು: ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಆಯ್ತು, ಇದೀಗ ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿಯಿಂದಲೂ ಟೆಂಪಲ್ ರನ್ ಆರಂಭವಾಗಿದೆ.ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಹೋಗಿದ್ದು, ಅಲ್ಲಿ ಮಂಜುನಾಥನ ದರ್ಶನ ಪಡೆದ್ದಾರೆ. ಜೊತೆಗೆ ದೇವರ ಎದುರು ಬಿ ಫಾರ್ಮ್ ಇಟ್ಟು ವಿಶೇಷ ಪೂಜೆಯನ್ನು ಮಾಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಧರ್ಮಸ್ಥಳದಿಂದ ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ತೆರಳಲಿಲ್ಲ. ಬದಲಿಗೆ ಜೆಡಿಎಸ್ ಮುಖಂಡರು ಹೋಗಿ ಪೂಜೆ ಮಾಡಿಸಿ ಪ್ರಸಾದವನ್ನು ತಂದು ಕೊಟ್ಟಿದ್ದಾರೆ.ಅನಿತಾ ಕುಮಾರಸ್ವಾಮಿ ಧರ್ಮಸ್ಥಳದಿಂದ ಶೃಂಗೇರಿಗೆ ತೆರಳಲಿದ್ದು, ಅಲ್ಲಿ ತಾಯಿ ಶಾರದಾಂಬೆ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಇತ್ತ ಉಪ ಚುನಾವಣೆಯಲ್ಲಿ ರಾಮನಗರದಲ್ಲಿ ಟಿಕೆಟ್ ಸಿಕ್ಕಿದ ಹಿನ್ನೆಲೆಯಲ್ಲಿ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.ರಾಮನಗರ ವಿಧಾನಸಭೆ ಚುನಾವಣೆಯಲ್ಲಿ ಅನಿತಾ ಸ್ಪರ್ಧೆಗೆ ಜೆಡಿಎಸ್ ಮತ್ತು ಕಾಂಗ್ರೆಸ್ಸಿನಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ವಿದ್ಯಮಾನಗಳ ಜೊತೆಗೆ ಹೆಚ್‍ಡಿಕೆ ಸರ್ಕಾರ ಇನ್ನೆರಡು ತಿಂಗಳಲ್ಲಿ ಉರುಳಲಿದೆ ಎಂದು ಬಿಜೆಪಿ ನಾಯಕರ ಹೇಳಿಕೆಯ ಬೆನ್ನಲ್ಲೇ ಅನಿತಾ ಕುಮಾರಸ್ವಾಮಿ ಅವರ ಧರ್ಮಸ್ಥಳದ ಭೇಟಿ ಮಹತ್ವ ಪಡೆದಿದೆ.ಜೆಡಿಎಸ್ ಅಭ್ಯರ್ಥಿಗಳ ಬಿ ಫಾರಂಗೆ ವಿಶೇಷ ಪೂಜೆ ನಡೆಸುವುದು ಇದೇ ಹೊಸದೆನಲ್ಲ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ರೇವಣ್ಣ ತಿರುಪತಿಗೆ ತೆಗೆದುಕೊಂಡು ಹೋಗಿ ಪೂಜೆ ಮಾಡಿಸಿದ್ದರು. ರೇವಣ್ಣ ಸಹ ಮೊನ್ನೆ ಅನಿತಾ ಕುಮಾರಸ್ವಾಮಿ ಅವರ ಬಿ ಫಾರಂಗೆ ಪೂಜೆ ಮಾಡಿಸಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


