ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದ ವಿದ್ಯುತ್ ದೀಪಾಲಂಕಾರ ಅದುವೇ ಬೆಳಕಿನ ಚಿತ್ತಾರ. ನಾನಾ ಬಗೆಯಲ್ಲಿ ಬೆಳಕು ಸೂಸುವ ಬಗೆಬಗೆಯ ವಿನ್ಯಾಸದ ಮನಮೋಹಕ ಬೆಳಕಿನ ವೈಭವ ನೋಡುಗರ ಕಣ್ಣುಗಳಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡುತ್ತದೆ. ಈ ಬಾರಿ ವಿಭ್ನಿನವಾಗಿ ಹಾಗೂ ವಿಶೇಷವಾಗಿ ಅಲಂಕಾರ ಮಾಡಲಾಗಿದೆ.ದಸರಾ ವೇಳೆ ಮೈಸೂರು ಅರಮನೆ ಮಾತ್ರವಲ್ಲದೆ, ಇಡೀ ನಗರ ಕತ್ತಲಾಗುತ್ತಿದ್ದಂತೆಯೇ ವಿದ್ಯುತ್ ದೀಪಗಳ ಅಲಂಕಾರ, ಬೆಳಕಿನ ವೈಯ್ಯಾರ ಕಣ್ಣಿಗೆ ಕಟ್ಟುತ್ತಿದೆ. ನಗರದ ಎಲ್ಲಾ ರಸ್ತೆಗಳು ಹಾಗೂ ವೃತ್ತಗಳು ಬಣ್ಣ ಬಣ್ಣದ ದೀಪಗಳಿಂದ ಕಂಗೊಳಿಸುತ್ತಿವೆ.ಈ ಬಾರಿ ವಿಶೇಷವಾಗಿ ನಗರದ ರಸ್ತೆಗಳಲ್ಲಿ ಹಾಗೂ ವೃತ್ತಗಳಲ್ಲಿ ಅನೇಕ ಗಣ್ಯರ ಹಾಗೂ ಪಾರಂಪರಿಕ ಕಟ್ಟಡಗಳನ್ನು ಬಿದಿರಿನಿಂದ ತಯಾರು ಮಾಡಿ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಚಾಮುಂಡೇಶ್ವರಿ, ಬುದ್ಧ, ಬಸವ, ಅಂಬೇಡ್ಕರ್, ಗಾಂಧಿಜೀ, ನಾಲ್ವಡಿ, ವಿಶ್ವೇಶ್ವರಯ್ಯ, ಕೃಷ್ಣರಾಜ ಒಡೆಯರ್, ಜಂಜೂ ಸವಾರಿ ಸೇರಿದಂತೆ ಅನೇಕ ಮಹನೀಯರ ಪ್ರತಿಕೃತಿಗಳನ್ನು ನಗರದಲ್ಲಿ ನಿರ್ಮಿಸಲಾಗಿದೆ.ಮೈಸೂರು ಅರಮನೆ, ಸಂಸತ್ ಭವನ, ವಿಧಾನಸೌಧ, ಕೆಆರ್‍ಎಸ್ ಇಂಡಿಯಾ ಗೇಟ್, ಹಂಪಿಯ ರಥ ಸೇರಿದಂತೆ ಹಲವು ಪ್ರತಿಕೃತಿಗಳು ಲೈಟ್ ಗಳಲ್ಲಿ ಜಗಮಗಿಸುತ್ತೀವೆ. ಪ್ರವಾಸಿಗರಿಗೆ ಇಂತಹ ಕಟ್ಟಡಗಳ ಮಹತ್ವವನ್ನು ಸಾರುವ ದೃಷ್ಟಿಯಿಂದ ಮಾಡಲಾಗಿದೆ.https://www.youtube.com/watch?v=KhpVKpi1lnoಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


