ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಈ ಘಟನೆ ಹುಬ್ಬಳ್ಳಿಯ ತಾಬಿಬ್ ಲ್ಯಾಂಡ್ ಬಳಿ ನಡೆದಿದೆ. ಇಮ್ತೀಯಾಜ್ ಕಣವಿ (35) ಅಲಿಯಾಸ್ ಕಾಡತೂಸ್ ಕೊಲೆಯಾದ ವ್ಯಕ್ತಿ. ಇವರನ್ನು ದಾವೂದ್ ನಾದಫ್ ಹಾಗೂ ಸಹಚರರು ಬರ್ಬರವಾಗಿ ಕೊಲೆಗೈದಿದ್ದಾರೆ.ಮೃತ ವ್ಯಕ್ತಿ ಹಾಗೂ ದಾವೂದ್ ಹುಬ್ಬಳ್ಳಿಯ ಮಂಟೂರ್ ರಸ್ತೆಯ ಮೌಲಾಲಿ ಜೊಪಡಿ ನಿವಾಸಿಗಳಾಗಿದ್ದಾರೆ. ಊಟಕ್ಕೆಂದು ಹೊರಗಡೆ ಬಂದಾಗ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ನಡುವೆ ಜಗಳವಾಗಿದೆ. ಈ ಜಗಳ ತಾರಕಕ್ಕೇರಿ ದಾವೂದ್ ಸಹಚರರು ಇಮ್ತಿಯಾಜ್ ಯವರನ್ನು ಕೊಲೆಗೈದಿದ್ದಾರೆ.ಸ್ಥಳಕ್ಕೆ ಶಹರ ಠಾಣೆಯ ಪೊಲೀಸರು ಭೇಟಿ ನೀಡಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಸಂಬಂಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


