ಉಡುಪಿ: ವಸತಿ ಸಚಿವ ಯು.ಟಿ.ಖಾದರ್ ಅವರಿಗೆ ಸ್ಮಾರ್ಟ್ ಸಿಟಿಗಿಂತ ಕಸಾಯಿಖಾನೆಗಳ ಬಗ್ಗೆ ಜಾಸ್ತಿ ಆಸಕ್ತಿ ಇದೆ ಅಂತ ವಿಧಾನ ಸಭೆಯ ವಿಪಕ್ಷ ಮುಖ್ಯ ಸಚೇತಕ ಹಾಗೂ ಶಾಸಕ ಸುನೀಲ್ ಕುಮಾರ್ ಆರೋಪ ಮಾಡಿದ್ದಾರೆ.ಕಾರ್ಕಳದಲ್ಲಿ ಮಾತನಾಡಿದ ಅವರು, ರಾಜ್ಯದ ಜನ ಸುಂದರ ನಗರವನ್ನು ಬಯಸುತ್ತಾರೆ. ಆದರೆ ಕಸಾಯಿಖಾನೆ ಮುಚ್ಚಲು, ಅಕ್ರಮ ಗೋವು ಸಾಗಾಟ ತಡೆಯಲು ರಾಜ್ಯ ಸರ್ಕಾರಕ್ಕೆ ತಾಕತ್ತಿಲ್ಲ. ಸ್ಮಾರ್ಟ್ ಸಿಟಿಯ ಅನುದಾನ ಹಣವನ್ನು ಅಭಿವೃದ್ಧಿಗೆ ಬಳಸಬೇಕಾಗಿತ್ತು. ಅದರ ಬದಲು ಕಸಾಯಿಖಾನೆಗೆ ಹಣ ಬಳಸಿರುವ ಹಿಂದೆ ದೊಡ್ಡ ಹುನ್ನಾರ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೂಡಲೇ ಸಚಿವ ಯು.ಟಿ.ಖಾದರ್ ಇದಕ್ಕೆ ಸ್ಪಷ್ಟನೆ ಕೊಡಬೇಕು. 15 ಕೋಟಿ ರೂಪಾಯಿ ಹಣವನ್ನು ನಾವು ಕಸಾಯಿಖಾನೆಗೆ ಬಳಕೆ ಮಾಡಲು ಬಿಡಲ್ಲ. ಇದು ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ವಿಷಯವಲ್ಲ. ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ. ಹಿಂದೂ ವಿರೋಧಿ ನೀತಿಯನ್ನು ತಕ್ಷಣ ಕೈಬಿಟ್ಟು, ಅವರ ನಿಲುವನ್ನು ಸ್ಪಷ್ಟ ಪಡಿಸಬೇಕೆಂದು ಆಗ್ರಹಿಸಿದರು.ಖಾದರ್ ಮತ್ತು ಬೆಂಬಲಿಗರು ಅಪರಾಧಿ ಚಟುವಟಿಕೆಗೆ ಬೆಂಬಲಿಸುತ್ತಿದ್ದಾರೆ. ಸರ್ಕಾರಿ ಹಣ ಅಭಿವೃದ್ಧಿಗೆ ಉಪಯೋಗವಾಗಲಿ. ಅಲ್ಲದೇ ಮಹಾನಗರಪಾಲಿಕೆ ಅಧಿಕಾರಿಗಳೂ ಸಹ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು. ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


