ಮಡಿಕೇರಿ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಇನ್ನೂ 24 ಗಂಟೆ ಭೀಕರ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ತಮಿಳುನಾಡು, ಕೇರಳದಲ್ಲಿ ಚಂಡಮಾರುತದ ಜೊತೆ ಭಾರೀ ಮಳೆಯಾಗಲಿದೆಯಂತೆ. ಇತ್ತ ಕೊಡಗಿನಲ್ಲೂ ಇಂದಿನಿಂದ ಇನ್ನೂ ಮೂರು ದಿನ ಭಾರೀ ಮಳೆಯ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಭೀಕರ ಪ್ರವಾಹಕ್ಕೆ ನಲುಗಿ ಈಗಷ್ಟೇ ಸುಧಾರಿಸಿಕೊಳ್ಳುತ್ತಿರುವ ಕೊಡಗು ಹಾಗೂ ಕೇರಳಕ್ಕೆ ಮಳೆಯ ಎಚ್ಚರಿಕೆ ಮತ್ತೆ ಆತಂಕ ತಂದೊಡ್ಡಿದೆ.ಈಗಾಗಲೇ ಕೇರಳದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಡುಕ್ಕಿ, ಜಲಾಶಯ ಸೇರಿದಂತೆ 22 ಡ್ಯಾಂಗಳಿಂದ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಜನರು ಮತ್ತೆ ಭಯಭೀತರಾಗಿದ್ದಾರೆ.ಕೊಡಗು ಜಿಲ್ಲಾಧಿಕಾರಿ ಶ್ರೀ ವಿದ್ಯಾ, ಅಧಿಕಾರಿಗಳು 6 ರಿಂದ 8ರ ವರೆಗೆ ಸಾರ್ವತ್ರಿಕ ರಜಾ ದಿನಗಳಿದ್ದರೂ ಕೇಂದ್ರ ಸ್ಥಾನ ಬಿಡದಿರುವಂತೆ ಆದೇಶ ಹೊರಡಿಸಿದ್ದಾರೆ. ಇತ್ತ ಕರಾವಳಿ ತೀರ ಪ್ರದೇಶಗಳಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಲ್ಲೂ ನಿನ್ನೆ ಇಡೀ ದಿನ ಜಿಟಿಜಿಟಿ ಮಳೆಯಾಗಿ ಜನ ಹೈರಾಣಾಗಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


