ಕೋಲಾರ: ಮುಳಬಾಗಿಲು ತಾಲೂಕು ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡುವಂತೆ ಒತ್ತಾಯಿಸಿ, ಕಿಸಾನ್ ವೇದಿಕೆ ಕಾರ್ಯಕರ್ತರು ದನಕರು, ಕೋಳಿ ಮತ್ತು ನಾಯಿಗಳೊಂದಿಗೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.ಮುಳಬಾಗಿಲು ತಾಲೂಕು ಕಚೇರಿ ಎದುರು ಪ್ರತಿಭಟನೆ ಪ್ರಾರಂಭಿಸಿದ ಕಿಸಾನ್ ಕಾರ್ಯಕರ್ತರು, ತಾಲೂಕು ಕಚೇರಿಯಲ್ಲಿ ಕಳೆದ 6 ತಿಂಗಳುಗಳಿಂದ ತಹಶೀಲ್ದಾರ್ ಹುದ್ದೆ ಖಾಲಿ ಇದೆ. ಜೊತೆಗೆ ಸುಮಾರು ಕಚೇರಿಯ ವಿವಿಧ 36 ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ದಿನನಿತ್ಯವೂ ಪಹಣಿ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಕಿಡಿಕಾರಿದರು.ಸರ್ಕಾರ ಕೂಡಲೇ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು. ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಬಳಿಕ ಪ್ರತಿಭಟನಾಕಾರರ ಸಮ್ಮುಖದಲ್ಲಿ ಉನ್ನತ ಅಧಿಕಾರಿಗಳಿಗೆ ಕರೆ ಮಾಡಿ, ಸಮಸ್ಯೆಯನ್ನು ತಿಳಿಸಲಾಯಿತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


