ಬೆಂಗಳೂರು: ಬಿಡಿಎ ಎಂಜಿನಿಯರ್ ಗೌಡಯ್ಯ ಮನೆ ಮೇಲೆ ಬರೋಬ್ಬರಿ 20 ಗಂಟೆಗಳ ಕಾಲ ನಡೆದ ದಾಳಿ ಅಂತ್ಯವಾಗಿದ್ದು, ಸದ್ಯ ಗೌಡಯ್ಯನ ರಹಸ್ಯ ಬಗೆದಷ್ಟೂ ಬಯಲಾಗ್ತಿದೆ.ಶುಕ್ರವಾರ ಮಧ್ಯರಾತ್ರಿವರೆಗೆ ಪರಿಶೀಲನೆ ನಡೆಸಿ ಎಸಿಬಿ ಅಧಿಕಾರಿಗಳು ನಿಟೀಸ್ ಜಾರಿ ಮಾಡಿ ಹಿಂದಿರುಗಿದ್ದಾರೆ. ಹೊಸ ಸರ್ಕಾರ, ಹೊಸ ಸಚಿವರು ಬಂದ್ರೂ ಗೌಡಯ್ಯ ಮಾತ್ರ ಕದಲುತ್ತಿಲ್ಲ ಯಾಕೆ ಎನ್ನುವ ಪ್ರಶ್ನೆಯೊಂದು ಇದೀಗ ಜನಸಾಮಾನ್ಯರಲ್ಲಿ ಮೂಡಿದೆ.ಗೌಡಯ್ಯ ಡಿಸಿಎಂ ಅದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿರಲಿಲ್ಲ. ಹೀಗಾಗಿ ಪರಮೇಶ್ವರ್ ಅವರು ಬಿಡಿಎ ಅಧ್ಯಕ್ಷರಾಗುತ್ತಿದ್ದಂತೆ ಗೌಡಯ್ಯನ ಬದಲಾವಣೆಗೆ ಮುಂದಾಗಿದ್ದರು. ಆದ್ರೆ ಈ ವೇಳೆ ಗೌಡಯ್ಯನ ಕಾಪಾಡಲು ಸಚಿವ ಎಚ್.ಡಿ.ರೇವಣ್ಣ ಅವರು ಎಂಟ್ರಿ ಕೊಟ್ಟಿದ್ದು, ಗೌಡಯ್ಯನ ಬದಲಾವಣೆ ಮಾಡದಂತೆ ಸಚಿವ ಪರಮೇಶ್ವರ್‍ಗೆ ತಾಕೀತು ಮಾಡಿದ್ದರು. ಇಷ್ಟು ಮಾತ್ರವಲ್ಲದೇ ರೇವಣ್ಣ ಅವರು ದೇವೇಗೌಡರಿಂದಲೂ ಫೋನ್ ಮಾಡಿಸಿ ಒತ್ತಡ ಹೇರಿದ್ದರು ಎಂಬ ಮಾಹಿತಿಯೊಂದು ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.ದಾಳಿ ವೇಳೆ ಸಿಕ್ಕಿದ್ದೇನು..?:
ಎಸಿಬಿ ದಾಳಿ ವೇಳೆ 10 ಕೆ.ಜಿ ಚಿನ್ನ, ಕೋಟಿ ಕೋಟಿ ನಗದು ಪತ್ತೆಯಾಗಿದೆ. ಅಲ್ಲದೇ 40 ಎಕರೆ ಜಮೀನು, ಡಾಂಬರು ಮಿಶ್ರಣ ಘಟಕ, ರೋಡ್ ರೋಲರ್, ಶಾಲಾ ಬಸ್‍ಗಳು, ಕಾರುಗಳು ಪತ್ತೆಯಾಗಿವೆ. ನಿನ್ನೆಯ ದಾಳಿಯಲ್ಲಿ ಸುಮಾರು 200 ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು. ಇತ್ತ ಜಯನಗರದಲ್ಲಿರೋ ಅತ್ತೆಯ ಮನೆಯಲ್ಲಿ ಕೆಜಿಗಟ್ಟಲೇ ಚಿನ್ನ ಇಟ್ಟಿದ್ದು ದಾಳಿ ವೇಳೆ ಬಹಿರಂಗವಾಗಿದೆ. ಅತ್ತೆ ಮನೆಯಲ್ಲಿ ಗೌಡಯ್ಯ ದಂಪತಿ 80 ಬಳೆ, ವಜ್ರದ ಸರ ಒಟ್ಟು 4.5 ಕೆ.ಜಿ ಚಿನ್ನದ ಆಭರಣ ಬಚ್ಚಿಟ್ಟಿದ್ದರು. ಆದ್ರೆ ಇದು ಅತ್ತೆಗೇ ಗೊತ್ತಿರಲಿಲ್ಲ. ಎಸಿಬಿ ರೈಡ್ ಮಾಡಿ ಬಾಚಿಕೊಂಡ ಬಳಿಕ ಅತ್ತೆಗೆ ಚಿನ್ನ ಎಂದು ಗೊತ್ತಾಗಿರುವುದಾಗಿ ತಿಳಿದುಬಂದಿದೆ.ಅತ್ತೆ ಮನೆಯಲ್ಲಿ ಗೌಡಯ್ಯ ದಂಪತಿ ಕೋಣೆಯೊಂದನ್ನ ಇಟ್ಟಿಕೊಂಡಿದ್ದರು. ಅತ್ತೆ ಮನೆಗೆ ಗೌಡಯ್ಯ ದಂಪತಿ ಹೋದಾಗಲೆಲ್ಲ ರೂಂಗೆ ಹೋಗಿ ಬಾಗಿಲು ಹಾಕಿಕೊಳ್ಳುತ್ತಿದ್ದರಂತೆ. ಮನೆಯಲ್ಲಿದ್ದ ಚಿನ್ನಾಭರಣ ಎಸಿಬಿ ಅಧಿಕಾರಿಗಳು ದಾಳಿ ವೇಳೆ ವಶಪಡಿಸಿಕೊಂಡಾಗ ಗೌಡಯ್ಯನ ಅತ್ತೆ ಕಕ್ಕಾಬಿಕ್ಕಿ ಆದರು. ಸದ್ಯ ಅತ್ತೆ ಮನೆಯಿಂದ 80 ಬಳೆ, 15 ಕ್ಯಾರೆಟ್ ವಜ್ರದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರದಿಂದ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಲಾಗುತ್ತದೆ. ಗೌಡಯ್ಯ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲೂ ಭಾರೀ ಆಸ್ತಿ ಸಂಪಾದಿಸಿದ್ದಾರೆ. 40 ಎಕರೆ ಜಮೀನು, ಡಾಂಬರು ಮಿಶ್ರಣ ಘಟಕ, ರೋಡ್ ರೋಲರ್, ಶಾಲಾ ಬಸ್‍ಗಳು, ಕಾರುಗಳು ಪತ್ತೆಯಾಗಿವೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvhttps://www.youtube.com/watch?v=jr1aIT3Pc_gSign in to your account
Username or Email Address


Password

 Remember Me


