ಬೆಂಗಳೂರು:  ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು, ಗಾಯಾಳು ಪಾದಚಾರಿಯೊಬ್ಬರು 45 ನಿಮಿಷಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲೇ ನರಳಾಟ ನಡೆಸಿದ ಮನಕಲಕುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಹಿಮಾಪುರ ಗೇಟ್ ಬಳಿ ನಡೆದಿದೆ.ಅಪಫಾತ ಸಂಭವಿಸಿದ ನಂತರ ಆಸ್ಪತ್ರೆಗೆ ದಾಖಲಿಸುವಂತೆ ಗಾಯಾಳು ಕೈ ಮುಗಿದು ಬೇಡಿಕೊಂಡರೂ ಸ್ಥಳೀಯರು ಹಾಗೂ ಸವಾರರು ಮಾನವೀಯತೆ ಮರೆತಿದ್ದಾರೆ. ಆಸ್ಪತ್ರೆಗೆ ಸೇರಿಸಲು ಮೀನಾಮೇಷ ಮಾಡಿದ್ದಾರೆ. ಟೋಲ್ ಸಿಬ್ಬಂದಿ ಕೂಡ ಕೂಡಲೇ ಯುವಕನನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿಲ್ಲ.ಈ ಘಟನೆಯ ಬಳಿಕ ಕೆಎಸ್ಆರ್‌ಟಿಸಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನನ್ನು ನಂತರ ಸ್ಥಳೀಯ ಆಸ್ಪತ್ರೆಗೆ ಅಲ್ಲಿನ ವಾಹನ ಸವಾರರು ದಾಖಲಿಸಿದರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


