ಉಡುಪಿ: ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಅವರು ಇಂದು ಕುಟುಂಬ ಸಮೇತರಾಗಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಹೌದು, ಸಿಬಿಐ ಹಾಗೂ ಇಡಿ ತನಿಖೆಯಿಂದ ಹೈರಾಣಾಗಿರುವ ಡಿಕೆ ಶಿವಕುಮಾರ್ ರವರು ಇಂದು ಕೊಲ್ಲೂರು ಮೂಕಾಂಬಿಕೆಗೆ ಶರಣಾಗಿದ್ದಾರೆ. ಪತ್ನಿ ಉಷಾ ಶಿವಕುಮಾರ್, ಮಗಳು ಐಶ್ವರ್ಯ ಜೊತೆ ಆಗಮಿಸಿದ ಅವರು, ದೇವಸ್ಥಾನದ ಪ್ರಾಂಗಣಕ್ಕೆ ಪ್ರವೇಶಿಸಿ ಗರುಡಗಂಬಕ್ಕೆ ಮೊದಲು ಪೂಜೆ ಸಲ್ಲಿಸಿದರು.ದೇವಸ್ಥಾನದೊಳಗೆ ತೆರಳಿದ ಡಿಕೆಶಿ ಕುಟುಂಬ ಮೂಕಾಂಬಿಕೆಗೆ ಅರ್ಚಕರು ಸಚಿವರ ಪರವಾಗಿ ವಿಶೇಷ ಪೂಜೆ, ಆರತಿ ಸೇವೆಯನ್ನು ಸಲ್ಲಿಕೆ ಮಾಡಿದರು. ಪೂಜೆಯ ವೇಳೆ ಭಕ್ತಿ ಪರವಶರಾಗಿದ್ದ ಡಿಕೆಶಿ ಬಂದಿರುವ ಸಂಕಷ್ಟಗಳೆಲ್ಲ ದೂರವಾಗಿ ನೆಮ್ಮದಿ ಪ್ರಾಪ್ತಿ ಮಾಡುವಂತೆ ಪ್ರಧಾನ ಅರ್ಚಕರಲ್ಲಿ ದೇವಿಗೆ ಆರತಿ ಮಾಡಿಸಿದ್ದಾರೆ. ಅರ್ಚಕರು ರಾಜಕೀಯವಾಗಿ ಶ್ರೇಯೋಭಿವೃದ್ಧಿಯಾಗಲಿ, ಸಂಕಟಗಳೆಲ್ಲಾ ನಿವಾರಣೆಯಾಗಲಿ ಅಂತ ಅರ್ಚನೆ ಮಾಡಿದ್ದಾರೆ.ದೇಗುಲ ಭೇಟಿಯ ನಂತರ ದೇವಸ್ಥಾನದ ಪ್ರಾಂಗಣದಲ್ಲಿದ್ದ ಎಲ್ಲಾ ಗುಡಿಗಳ ಬಳಿಗೆ ತೆರಳಿದ ಅವರು ವೀರಭದ್ರ, ದೇವಿ, ಗಣಪತಿ ಗುಡಿಗಳಿಗೆ ಅರ್ಚನೆ ಸಲ್ಲಿಸಿದರು. ದೇವಸ್ಥಾನ ಭೇಟಿಯ ನಂತರ ಬೈಂದೂರು ತಾಲೂಕಿನ ವರಾಹಿ ನೀರಾವರಿ ಯೋಜನೆ ಬಗ್ಗೆ ಅಧಿಕಾರಿಗಳ ಜೊತೆ ಸಭೆಗೆ ತೆರಳಿದರು. ಜಿಲ್ಲಾಮಟ್ಟದ ನಾಯಕರಿಗೆ ಮಾಹಿತಿ ನೀಡಿದ ಡಿಕೆಶಿಯವರು ತಮ್ಮ ಕುಟುಂಬದ ಸದಸ್ಯರು ಮಾತ್ರ ಜೊತೆಗಿರುವಂತೆ ನೋಡಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


