ಚಾಮರಾಜನಗರ: ಸಫಾರಿಗೆ ತೆರಳಿದ್ದ ವೇಳೆ ಕಾಡಾನೆ ದಾಳಿಯಿಂದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.ಭಾನುವಾರ ಸಂಜೆ ಪ್ರವಾಸಿಗರು ಬಂಡೀಪುರಕ್ಕೆ ಬಂದಿದ್ದರು. ಹೀಗೆ ಬಂದವರು ಸಫಾರಿ ಹೋಗುತ್ತಿದ್ದ ವೇಳೆ ನಾಲ್ಕು ಆನೆಗಳಿದ್ದ ಗುಂಪೊಂದನ್ನು ನೋಡಿದ್ದಾರೆ. ಆದ್ರೆ ಪ್ರವಾಸಿಗರು ತಮ್ಮ ಪಾಡಿಗೆ ತಾವು ಹೋಗುತ್ತಿದ್ದರು. ಇದೇ ಸಂದರ್ಭದಲ್ಲಿ ಗುಂಪಿನಲ್ಲಿದ್ದ ಆನೆಗಳ ಪೈಕಿ ಮರಿಯಾನೆಯೊಂದು ಏಕಾಏಕಿ ದಾಳಿ ಮಾಡಲು ಮುಂದಾಗಿದೆ.ಅದೃಷ್ಟವಶಾತ್ ವಾಹನದ ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರು ಪಾರಾಗಿದ್ದಾರೆ. ಮರಿಯಾನೆಗೆ ಪ್ರವಾಸಿಗರು ತೊಂದರೆ ಮಾಡಬಹುದು ಎಂದು ಭಾವಿಸಿ ಈ ದಾಳಿ ಮಾಡಲು ಮುಂದಾಗಿರಬಹುದು ಎಂದು ಅಂದಾಜಿಸಲಾಗಿದೆ. ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvhttps://www.youtube.com/watch?v=o9_ovJwjnIYSign in to your account
Username or Email Address


Password

 Remember Me


