ಹಾವೇರಿ: ಸಿಡಿಲು ಬಡಿದು ರೈತನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದಲ್ಲಿ ನಡೆದಿದೆ.ಚಿಕ್ಕಮಲ್ಲೂರು ಗ್ರಾಮದ ತಮ್ಮಣ್ಣ ಸಾವಕ್ಕನವರ (42) ಸಿಡಿಲಿಗೆ ಬಲಿಯಾದ ರೈತ. ಇಂದು ಎಂದಿನಂತೆ ರೈತ ತಮ್ಮಣ್ಣ ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಸಂಜೆ 4.30ರ ಸುಮಾರಿಗೆ ಜಮೀನಿನಲ್ಲಿ ಕೆಲಸದಲ್ಲಿ ತೊಡಗಿದ್ದಾಗಿ ಏಕಾಏಕಿ ಸಿಡಿಲು ಬಡಿದು ಕುಸಿದು ಬಿದ್ದಿದ್ದಾರೆ. ಕೂಡಲೇ ಅಕ್ಕ-ಪಕ್ಕದ ಜಮೀನಿನವರು ಗಮನಿಸಿ ತಮ್ಮಣ್ಣನವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ.ರೈತ ಸಾವನ್ನಪ್ಪಿದ ವಿಷಯ ತಿಳಿದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬುಧವಾರದಿಂದಲೂ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದು ಸಹ ಗುಡುಗು ಸಹಿತ ಮಳೆಯಾಗಿದೆ. ಅಲ್ಲದೇ ಕೆಲವು ಕಡೆ ಭಾರೀ ಗುಡುಗು-ಸಿಡಿಲು ಸಂಭವಿಸಿದೆ ಎಂದು ತಿಳಿದು ಬಂದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


