ಮೈಸೂರು: ಅಪಘಾತದಲ್ಲಿ ಕೈ ಮುರಿದುಕೊಂಡು ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೋಡಲು ತಮ್ಮ ನಿರ್ದೇಶಕ ದಿನಕರ್ ತೂಗುದೀಪ ಅವರು ಬಂದಿಲ್ಲ.ದಿನಕರ್ ಅವರು ಕೂಡ ಜ್ವರದಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ದರ್ಶನ್ ಆರೋಗ್ಯ ವಿಚಾರಿಸಲು ಬಂದಿಲ್ಲ. ಅತ್ತ ಅಣ್ಣ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಇತ್ತ ದಿನಕರ್ ಮನೆಯಲ್ಲಿ ಜ್ವರದಿಂದ ಬಳಲುತ್ತಿದ್ದಾರೆ. ದಿನಕರ್ ಅವರಿಗೆ ಕಳೆದ ಒಂದು ವಾರದಿಂದ ಬಿಡದೆ ವೈರಲ್ ಫೀವರ್ ಕಾಡುತ್ತಿದೆ. ಆದ್ರೆ ದಿನಕರ್ ಅವರು ಪ್ರತಿನಿತ್ಯ ದರ್ಶನ್ ಜೊತೆಯಲ್ಲಿ ದೂರವಾಣಿ ಸಂಪರ್ಕದಲ್ಲಿದ್ದಾರೆ. ಇದೇ ಕಾರಣದಿಂದ ಅವರು ಆಸ್ಪತ್ರೆಯ ಬಳಿ ಕಾಣಿಸಿಕೊಳ್ಳುತ್ತಿಲ್ಲ ಅಂತ ಆಪ್ತ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.ಇಂದೂ ಡಿಸ್ಚಾರ್ಜ್ ಡೌಟ್:
ನಟ ದರ್ಶನ್ ಕಾರ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಾಲ್ಕನೇ ದಿನವೂ ಚಿಕಿತ್ಸೆ ಮುಂದುವರಿದಿದೆ. ಹೀಗಾಗಿ ಇಂದೂ ಡಿಸ್ಚಾರ್ಜ್ ಆಗೋದು ಡೌಟು ಅಂತ ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.ಬುಧವಾರ ಸಂಜೆ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಆರೋಗ್ಯ ಚೇತರಿಸಿಕೊಳ್ಳುತ್ತಿದ್ದು, ಗಾಯಗಳ ಊತ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ಮಾಹಿತಿ ನೀಡಲಾಗಿತ್ತು. ಶುಕ್ರವಾರ ಸಂಜೆ ಅಥವಾ ಶನಿವಾರ ಬೆಳಗ್ಗೆ ಡಿಸ್ಚಾರ್ಜ್ ಸಾಧ್ಯತೆಗಳಿವೆ. ಸದ್ಯ ದರ್ಶನ್ ಅವರು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದೂ ಚಿತ್ರರಂಗದ ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಗಳಿವೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv Sign in to your account
Username or Email Address


Password

 Remember Me


