ಚಿಕ್ಕಬಳ್ಳಾಪುರ: ಸರ್ಕಾರಿ ಟಾಟಾ ಸುಮೋ ಹಾಗೂ ಖಾಸಗಿ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸರ್ಕಾರಿ ಮಹಿಳಾ ಆಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ತೀಲಕುಂಟಹಳ್ಳಿ ಕ್ರಾಸ್ ಬಳಿ ನಡೆದಿದೆ.ಅಪಘಾತದಲ್ಲಿ ಗುಡಿಬಂಡೆ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಜಯಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಜಯಲಕ್ಷ್ಮಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.ಸ್ವಿಫ್ಟ್ ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಟಾಟಾ ಸುಮೋಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಿಂದಾಗಿ ಟಾಟಾ ಸುಮೋ ಪಲ್ಟಿಯಾಗಿದ್ದು, ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿದೆ.ಈ ಸಂಬಂಧ ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


