ಮಂಗಳೂರು: ಡಾಂಬರು ಡಬ್ಬಿಗೆ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ನಾಯಿಯನ್ನು ಮಂಗಳೂರಿನ ಅನಿಮಲ್ ಕೇರ್ ಟ್ರಸ್ಟ್ ಸಿಬ್ಬಂದಿ ರಕ್ಷಿಸಿದ್ದಾರೆ.ನಗರ ಹೊರವಲಯದ ಬಜ್ಪೆ ಬಳಿ ರಸ್ತೆ ಡಾಂಬರೀಕರಣಕ್ಕಾಗಿ ಡಾಂಬರು ಡಬ್ಬಿಗಳನ್ನು ಇಡಲಾಗಿತ್ತು. ಈ ವೇಳೆ ಬೀದಿ ನಾಯಿಯೊಂದು ಆಕಸ್ಮಿಕವಾಗಿ ಡಾಂಬರು ಡಬ್ಬಿ ಒಳಗೆ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಕ್ತಿ ನಗರದ ಅನಿಮಲ್ ಕೇರ್ ಟ್ರಸ್ಟ್ ಸದಸ್ಯರು, ಡಾಂಬರಿನಲ್ಲಿ ಅದ್ದಿ ಹೋಗಿದ್ದ ನಾಯಿಯನ್ನು ಮೇಲೆತ್ತಿದ್ದಾರೆ. ಕೂಡಲೇ ತಮ್ಮ ಶಕ್ತಿನಗರದ ಅನಿಮಲ್ ಕೇರ್ ಸೆಂಟರಿಗೆ ಕೊಂಡೊಯ್ದು ಸುಮಾರು ಹತ್ತು ಲೀಟರ್‍ನಷ್ಟು ಅಡುಗೆ ಎಣ್ಣೆಯನ್ನು ನಾಯಿಯ ಮೈಗೆ ಸುರಿದಿದ್ದಾರೆ. ನಿಧಾನಕ್ಕೆ ನಾಯಿ ಮೈಯಲ್ಲಿ ಅಂಟಿದ್ದ ಹತ್ತು ಕೆಜಿಯಷ್ಟು ಡಾಂಬರನ್ನು ಬಟ್ಟೆಯಿಂದ ಉಜ್ಜಿ ತೆಗೆದಿದ್ದಾರೆ.ಸದ್ಯ ನಾಯಿ ಚೇತರಿಕೆ ಕಂಡಿದ್ದು ಮರುಜನ್ಮ ಪಡೆದಂತಾಗಿದೆ. ಡಾಂಬರು ಮೆತ್ತಿಕೊಂಡರೆ ಸುಲಭದಲ್ಲಿ ಬಿಡಿಸಲು ಸಾಧ್ಯವಾಗಲ್ಲ. ಅದರಲ್ಲೂ ಡಾಂಬರು ಡಬ್ಬಿಗೆ ಯಾವುದೇ ಪ್ರಾಣಿ ಬಿದ್ದರೆ ಅಲ್ಲಿಗೇ ಗತಿ ಮುಗಿಯುತ್ತೆ. ಈ ನಾಯಿ ಬಿದ್ದಾಗ ಕೂಡಲೇ ಸಾರ್ವಜನಿಕರು ನೋಡಿದ್ದರಿಂದ ಮರು ಜೀವ ಸಿಕ್ಕಂತಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


