ಬೆಂಗಳೂರು: ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿಯವರ ಬೇಡಿಕೆಗೆ ರಾಜ್ಯ ಸರ್ಕಾರ ಮಣಿದಿದ್ದು, ಬೆಳಗಾವಿ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಅವರನ್ನು ಎತ್ತಂಗಡಿ ಮಾಡಲಾಗಿದೆ.ಬೆಳಗಾವಿ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡುವಂತೆ ರಮೇಶ್ ಜಾರಕಿಹೊಳಿ ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಿದ್ದರು. ಈಗ ಜಿಯಾವುಲ್ಲಾ ಅವರನ್ನು ವರ್ಗಾವಣೆ ಮಾಡಿಸುವ ಮೂಲಕ ಕುಮಾರಸ್ವಾಮಿ ಬೆಳಗಾವಿ ಬಂಡಾಯವನ್ನು ಸ್ವಲ್ಪ ಶಮನ ಮಾಡುವ ಪ್ರಯತ್ನ ನಡೆಸಿದ್ದಾರೆ.ಬೆಳಗಾವಿ ಜಿಲ್ಲಾಧಿಕಾರಿಯಾಗಿ ಎಸ್.ಬಿ ಬೊಮ್ಮನಹಳ್ಳಿ ಅವರನ್ನು ನೇಮಕ ಮಾಡಲಾಗಿದೆ. 2017ರ ಆಗಸ್ಟ್ ನಲ್ಲಿ ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಜಿಯಾವುಲ್ಲಾ ಅವರನ್ನು ಸರ್ಕಾರ ಬೆಳಗಾವಿಗೆ ವರ್ಗಾವಣೆ ಮಾಡಿತ್ತು.ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡುವಂತೆ ರಮೇಶ್ ಜಾರಕಿಹೊಳಿ ಎರಡು ತಿಂಗಳ ಹಿಂದೆ ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ಈ ಬೇಡಿಕೆಯನ್ನು ಈಡೇರಿಸದ ಹಿನ್ನೆಲೆಯಲ್ಲಿ ತನ್ನ ಆಪ್ತರ ವಿರುದ್ಧ ಜಾರಕಿಹೊಳಿ ಸರ್ಕಾರದ ವಿರುದ್ಧ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರ ಬಲವಿದ್ದರೂ ನಮ್ಮ ಮಾತಿಗೆ ಬೆಲೆ ಇಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


